ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ಎಪಿಎಂಸಿ ವತಿಯಿಂದ ವಾಹನ ನಿಲುಗಡೆಗಾಗಿ ನಿರ್ಮಾಣವಾಗುತ್ತಿದ್ದ ಎರಡು ಅಂತಸ್ತಿನ ಕಟ್ಟಡದಲ್ಲಿ ಶುಕ್ರವಾರ ಮುಂಜಾನೆ ಈ ಅವಗಢ ನಡೆದಿದೆ.  

Last Updated : Apr 5, 2019, 08:39 AM IST
ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ title=
Representational Image

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಪಿಎಂಸಿ ವತಿಯಿಂದ ವಾಹನ ನಿಲುಗಡೆಗಾಗಿ ನಿರ್ಮಾಣವಾಗುತ್ತಿದ್ದ ಎರಡು ಅಂತಸ್ತಿನ ಕಟ್ಟಡ ಶುಕ್ರವಾರ ಮುಂಜಾನೆ ಕುಸಿದಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. 

ಆರ್ ಎಂಸಿ ವಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತ ಪಟ್ಟವರನ್ನು ಬಿಹಾರ ಮೂಲದ ರಾಕೇಶ್ ಮತ್ತು ರಾಹುಲ್ ಎಂದು ಗುರುತಿಸಲಾಗಿದೆ.

ಈ ದುರಂತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳಪೆ ಗುಣಮಟ್ಟದ ಕಾಮಗಾರಿಯೇ ಕಟ್ಟಡ ಕುಸಿತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
 

Trending News