ಕಾಂಗ್ರೆಸ್‌ ಸರ್ಕಾರ ಕೂಡಲೇ ರಾಜಿನಾಮೆ ಕೊಟ್ಟು ಮನೆಗೆ ತೆರಳಲಿ: ಬಿ.ವೈ.ವಿಜಯೇಂದ್ರ ಆಗ್ರಹ!

BY Vijayendra Slams Congress government: ಆದಾಯದ ಮೂಲಗಳನ್ನೆಲ್ಲ ಈಗಾಗಲೇ ದುಪ್ಪಟ್ಟು ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಸರ್ಕಾರ ಈಗ ಸರ್ಕಾರಿ ಆಸ್ತಿಗಳ ಮೇಲೂ ಕಣ್ಣು ಹಾಕಲು ಹೊರಟಿರುವುದನ್ನು ನೋಡಿದರೆ 'ಈ ಹಿಂದೆ ಚಿನ್ನ ಅಡವಿಟ್ಟು ದೇಶ ಮುನ್ನಡೆಸುವ ಸ್ಥಿತಿಗೆ ತಲುಪಿದ್ದ ಘಟನೆಯನ್ನು ನೆನಪಿಸುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಟ್ವೀಟ್‌ ಮಾಡಿದ್ದಾರೆ. 

Written by - Puttaraj K Alur | Last Updated : Jun 19, 2024, 06:31 PM IST
  • ರಾಜ್ಯ ಹಿಂದೆಂದೂ ಕಂಡರಿಯದ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ ಎಂದ ಬಿ.ವೈ.ವಿಜಯೇಂದ್ರ
  • ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಆಕ್ರೋಶ
  • ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಯೋಗ್ಯತೆ ಇಲ್ಲದಿದ್ರೆ ಕೂಡಲೇ ರಾಜಿನಾಮೆ ಕೊಟ್ಟು ಮನೆಗೆ ತೆರಳಲಿ
ಕಾಂಗ್ರೆಸ್‌ ಸರ್ಕಾರ ಕೂಡಲೇ ರಾಜಿನಾಮೆ ಕೊಟ್ಟು ಮನೆಗೆ ತೆರಳಲಿ: ಬಿ.ವೈ.ವಿಜಯೇಂದ್ರ ಆಗ್ರಹ! title=
ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆ ಮತ್ತು ಬೆಲೆ ಏರಿಕೆ ಮೂಲಕ ರಾಜ್ಯದ ಜನಸಾಮಾನ್ಯರಿಗೆ ಬರೆ ಹಾಕುತ್ತಿದೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಲೆ ಏರಿಕೆ ವಿಚಾರವಾಗಿಯೇ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. 

ʼರಾಜ್ಯ ಹಿಂದೆಂದೂ ಕಂಡರಿಯದ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಅಳಿದುಳಿದ ಸರ್ಕಾರಿ ಜಮೀನುಗಳನ್ನು ಆಶ್ರಯಿಸಿ ಸಂಪನ್ಮೂಲದ ಹಾದಿ ಕಂಡುಕೊಳ್ಳಲು ಹೊರಟಿರುವುದು ನಾಚಿಕೆಗೇಡಿನ ಕ್ರಮವಾಗಿದೆ. ಆದಾಯದ ಮೂಲಗಳನ್ನೆಲ್ಲ ಈಗಾಗಲೇ ದುಪ್ಪಟ್ಟು ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಸರ್ಕಾರ ಈಗ ಸರ್ಕಾರಿ ಆಸ್ತಿಗಳ ಮೇಲೂ ಕಣ್ಣು ಹಾಕಲು ಹೊರಟಿರುವುದನ್ನು ನೋಡಿದರೆ 'ಈ ಹಿಂದೆ ಚಿನ್ನ ಅಡವಿಟ್ಟು ದೇಶ ಮುನ್ನಡೆಸುವ ಸ್ಥಿತಿಗೆ ತಲುಪಿದ್ದ ಘಟನೆಯನ್ನು ನೆನಪಿಸುತ್ತಿದೆ' ಎಂದು ಕುಟುಕಿದ್ದಾರೆ.  

ಇದನ್ನೂ ಓದಿ: ಇಂಧನ ಏರಿಕೆ ವಿಷಯದಲ್ಲಿ ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್ ಪಕ್ಷದ ಕಪಟ ನಾಟಕ- ಯತ್ನಾಳ್ ವಾಗ್ದಾಳಿ 

ʼಈ ಸರ್ಕಾರಕ್ಕೆ ರಾಜ್ಯ ಅಭಿವೃದ್ಧಿಪಡಿಸಿ ಆದಾಯ ಮೂಲ ಹೆಚ್ಚಿಸಿಕೊಳ್ಳುವ ಯಾವ ಬದ್ಧತೆಯೂ ಕಾಣುತ್ತಿಲ್ಲ. ನಿರುದ್ಯೋಗ ನಿರ್ಮೂಲನೆ ಮಾಡಿ ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಳ್ಳುವ ಯೋಜನೆಗಳನ್ನು ರೂಪಿಸಲು ಆಗುತ್ತಿಲ್ಲ, ಕೃಷಿ ಉತ್ಪನ್ನಗಳನ್ನು ಉತ್ತೇಜಿಸಿ ಮಾರುಕಟ್ಟೆಯನ್ನು ಗಡಿಯಾಚೆಗೆ ವಿಸ್ತರಿಸಿ ರೈತರ ಬದುಕನ್ನು ಹಸನಾಗಿಸಿ ನಾಡು ಸಮೃದ್ಧಗೊಳಿಸುವ ಮಾರ್ಗ ತಿಳಿದಿಲ್ಲ. ತೆರಿಗೆಯ ಸುಲಿಗೆ, ಬೆಲೆ ಏರಿಕೆಯ ಅಸ್ತ್ರ, ವಸೂಲಿಯಾಗುವ ದುಡ್ಡನ್ನು ಪರ್ಸೆಂಟೇಜ್ ಮೂಲಕ ಹಾಗೂ ನಿಗಮಗಳ ಖಾತೆಗಳಿಗೆ ಕನ್ನ ಹಾಕಿ ಲಪಟಾಯಿಸುವ ಮಾರ್ಗ ಮಾತ್ರ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿರುವಂತಿದೆʼ ಎಂದು ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.  

ʼಈ ಕಾಂಗ್ರೆಸ್ ಸರ್ಕಾರಕ್ಕೆ ಆರ್ಥಿಕ ಸಮತೋಲನ ಕಾಯ್ದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಯೋಗ್ಯತೆ ಇಲ್ಲದಿದ್ದರೆ ಈ ಕೂಡಲೇ ರಾಜಿನಾಮೆ ಕೊಟ್ಟು ಮನೆಗೆ ತೆರಳಲಿ, ಆ ಮೂಲಕವಾದರೂ ರಾಜ್ಯದ ಸ್ಥಿತಿಯನ್ನು ಅಧೋಗತಿಗೆ ತಳ್ಳುವ ಮಾರ್ಗದಿಂದ ಮುಕ್ತಿ ಕೊಡಲಿʼ ಎಂದು ಅವರು ಆಗ್ರಹಿಸಿದ್ದಾರೆ. 

ಇದನ್ನೂ ಓದಿ: ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News