BREAKING NEWS: ರಾಜ್ಯದಲ್ಲಿ 'ಹೊಸ ಜಿಲ್ಲೆ' ರಚನೆಗೆ ಸಚಿವ ಸಂಪುಟ ಒಪ್ಪಿಗೆ..!

ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ

Last Updated : Nov 18, 2020, 12:09 PM IST
  • ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ
  • ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಒಪ್ಪಿಗೆ
  • ಮುಂದಿನ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಧಿಕೃತ ಅನುಮೋದನೆ
BREAKING NEWS: ರಾಜ್ಯದಲ್ಲಿ 'ಹೊಸ ಜಿಲ್ಲೆ' ರಚನೆಗೆ ಸಚಿವ ಸಂಪುಟ ಒಪ್ಪಿಗೆ..! title=

ಬೆಂಗಳೂರು: ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ರಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ(Madhuswamy), ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅಧಿಕೃತ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

ಭೀಕರ ಅಪಘಾತ: ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಢಿಕ್ಕಿ 11 ಸಾವು, 17 ಮಂದಿಗೆ ಗಂಭೀರ ಗಾಯ..!

ವಿಜಯನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆಯಾಗಲಿದೆ.

ಖ್ಯಾತ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕಾರು ಅಪಘಾತ

Trending News