ದೇಶದ ಪ್ರಧಾನಿಯಾದವರು ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳುಆರೋಪ ಮಾಡಬಹುದೇ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ 

ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ  ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬಾಲಿಶವಾದುದ್ದು. ದೇಶದ ಜನರಿಂದ ಆಯ್ಕೆಯಾಗಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪ್ರಶ್ನಾತೀತರೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Written by - Manjunath N | Last Updated : Nov 8, 2023, 12:12 AM IST
  • ರಾಜ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ
  • 800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ನ್ನು ಉತ್ಪಾದಿಸಲಾಗುತ್ತಿದೆ
  • ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ
ದೇಶದ ಪ್ರಧಾನಿಯಾದವರು ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳುಆರೋಪ ಮಾಡಬಹುದೇ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ  title=

ಬೆಂಗಳೂರು: ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ  ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬಾಲಿಶವಾದುದ್ದು. ದೇಶದ ಜನರಿಂದ ಆಯ್ಕೆಯಾಗಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪ್ರಶ್ನಾತೀತರೇ? ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿಯಾದವರು ಜನರ ಪ್ರತಿನಿಧಿಯೇ ಹೊರತು ಸರ್ವಾಧಿಕಾರಿಯಲ್ಲ.ಯಡಿಯೂರಪ್ಪ ಅವರ ಪ್ರಕಾರ ದೇಶದ ಪ್ರಧಾನಿಯಾದವರು ಮಧ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳುಆರೋಪ ಮಾಡಬಹುದೇ?
ರಾಜ್ಯ ಸರ್ಕಾರ ಎಲ್ಲದ್ದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ ಬದಲಿಗೆ ಪರಿಹಾರ ನೀಡಿ ಎಂದು ಕೇಳುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು.ಕರ್ನಾಟಕ ರಾಜ್ಯದಲ್ಲಿ ಬರ ಬಂದರೆ ಕೇಂದ್ರ ಸರ್ಕಾರದ್ದು ಜವಾಬ್ದಾರಿ ಇರುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತೆರಿಗೆ ನೀಡುತ್ತದೆ ಎಂದು ಹೇಳಿದರು.

ಇದನ್ನೂ ಓದಿ: “ಟೀಂ ಇಂಡಿಯಾ DRSನ್ನು ತನಗೆ ಬೇಕಾದಂತೆ ಬಳಸುತ್ತಿದೆ”- ಪಾಕ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆ ವೈರಲ್

ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಅನುದಾನವಿರುತ್ತದೆ. ಬೆಳೆ ನಷ್ಟವಾದಾಗ ಕೇಂದ್ರ ಸರ್ಕಾರದ ಜವಾಬ್ದಾರಿಯೂ ಇರುತ್ತದೆ. ರೂ.33,700 ಕೋಟಿ ಬೆಳೆ ನಷ್ಟವಾಗಿದ್ದು,17,900 ಕೋಟಿ ರೂ.ಗಳನ್ನು ಪರಿಹಾರವಾಗಿ ಕೇಳಿದ್ದೇವೆ.ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ಇಲ್ಲಿಗೆ ಭೇಟಿ ನೀಡಿ ಹೋಗಿದ್ದರೂ,ಇನ್ನೂ ವರದಿ ನೀಡಿಲ್ಲ.ಅನುದಾನ ಶೀಘ್ರ್ರವಾಗಿ ನೀಡಲು ಕೋರಿದ್ದೇವೆ.ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು,ಹಿಂಗಾರು ಮಳೆಯಾದರೂ ಬರಲಿ ಎಂದು ಹಾಸನಾಂಬೆಯಲ್ಲಿ ಪ್ರಾರ್ಥಿಸಿದ್ದೇನೆ. ಜೋಳ, ರಾಗಿ, ಭತ್ತ ಪ್ರಮುಖ ಬೆಳೆಗಳು,ಮುಂಗಾರು ಮಳೆ ಬರದೇ ಬೆಳೆಗಳು ಕೈಸೇರದಂತಾಗಿದೆ. ಕಡೇಪಕ್ಷ ಹಿಂಗಾರು ಮಳೆ ಬಂದರೆ ದನಕರುಗಳಿಗೆ ಮೇವು ದೊರೆಯುತ್ತದೆ ಎಂದರು.

ಇದನ್ನೂ ಓದಿ: ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ

ರಾಜ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. 800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ನ್ನು ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸಕ್ಕರೆ ಕಾರ್ಖಾನೆಗಳ ಪ್ರಾರಂಭದಿಂದಾಗಿ ವಿದ್ಯುತ್ ಕೋಜನರೇಷನ್ ಸಾಧ್ಯವಾಗುತ್ತಿದ್ದು, ಸುಮಾರು 450 ಮೆ.ವ್ಯಾ ವಿದ್ಯುತ್ ಉತ್ಪಾದನೆಯಾಗುತ್ತದೆ.  ಈ ಎಲ್ಲ ಕ್ರಮಗಳಿಂದ ಮೂರು ಫೇಸ್‌ಗಳಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News