ಕೇಂದ್ರ ಸರ್ಕಾರ ರೈತರ ಮೇಲೆ ಕ್ರೂರವಾಗಿ ಬಂದೂಕುಗಳ ಗುಂಡೇಟಿನ ಪ್ರಹಾರ ನಡೆಸುತ್ತಿದೆ-ಸಚಿವ ಪ್ರಿಯಾಂಕ್ ಖರ್ಗೆ

ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಒಕ್ಕೂಟ ಸರ್ಕಾರವು ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಈ ಮೂಲಕ ಒತ್ತಾಯಿಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : Feb 22, 2024, 11:54 PM IST
  • ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವಿಸಿ ಅವರ ಹಕ್ಕನ್ನು ಒದಗಿಸುವಲ್ಲಿ ಹಿಂದೆ ನಮ್ಮ ಯು.ಪಿ.ಎ ಸರ್ಕಾರ ಎಂದೂ ಹಿಂಜರಿದಿರಲಿಲ್ಲ.
  • ಆದರೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಗ್ಯಾರೆಂಟಿ ಒದಗಿಸಲು ತನ್ನ ಮಾತಿಗೆ ತಪ್ಪಿ ಕೇಂದ್ರ ಸರ್ಕಾರ ನಡೆಯುತ್ತಿದೆ,
  • ಇದನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಕ್ರೂರವಾಗಿ ಬಂದೂಕುಗಳ ಗುಂಡೇಟಿನ ಪ್ರಹಾರ ನಡೆಸುತ್ತಿದೆ ಎಂದು ಕಿಡಿ ಕಾರಿದರು.
ಕೇಂದ್ರ ಸರ್ಕಾರ ರೈತರ ಮೇಲೆ ಕ್ರೂರವಾಗಿ ಬಂದೂಕುಗಳ ಗುಂಡೇಟಿನ ಪ್ರಹಾರ ನಡೆಸುತ್ತಿದೆ-ಸಚಿವ ಪ್ರಿಯಾಂಕ್ ಖರ್ಗೆ  title=

ಬೆಂಗಳೂರು: ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಒಕ್ಕೂಟ ಸರ್ಕಾರವು ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಈ ಮೂಲಕ ಒತ್ತಾಯಿಸುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ರೈತ ವಿರೋಧಿಯಾಗಿ ವರ್ತಿಸುತ್ತಾ, ರೈತರ ನ್ಯಾಯಯುತ ಬೇಡಿಕೆಗಳಿಗೆ ಉತ್ತರವಾಗಿ ಅವರ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ವಿರುದ್ಧ ವಿಧಾನ ಸಭೆಯಲ್ಲಿ ನಮ್ಮ ಸರ್ಕಾರ ನಿರ್ಣಯ ಮಂಡಿಸಿದೆ ಎಂದು ಹೇಳಿದರು.

ಇದನ್ನೂ ಓದಿ: ರೀಲ್ ತಯಾರಿಸುವ ನಶೆಯಲ್ಲಿ ಪ್ರಾಣ ಪಣಕ್ಕಿಟ್ಟ ಯುವತಿ, ವಿಚಿತ್ರ ವರ್ತನೆ ಕಂಡು...!

ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವಿಸಿ ಅವರ ಹಕ್ಕನ್ನು ಒದಗಿಸುವಲ್ಲಿ ಹಿಂದೆ ನಮ್ಮ ಯು.ಪಿ.ಎ ಸರ್ಕಾರ ಎಂದೂ ಹಿಂಜರಿದಿರಲಿಲ್ಲ. ಆದರೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಗ್ಯಾರೆಂಟಿ ಒದಗಿಸಲು ತನ್ನ ಮಾತಿಗೆ ತಪ್ಪಿ ಕೇಂದ್ರ ಸರ್ಕಾರ ನಡೆಯುತ್ತಿದೆ, ಇದನ್ನು ಪ್ರಶ್ನಿಸುತ್ತಿರುವ ರೈತರ ಮೇಲೆ ಕ್ರೂರವಾಗಿ ಬಂದೂಕುಗಳ ಗುಂಡೇಟಿನ ಪ್ರಹಾರ ನಡೆಸುತ್ತಿದೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ:  ಲೋಕಸಭೆ ಹೊತ್ತಿನಲ್ಲಿ ತುಮಕೂರಿನಲ್ಲಿ ಬಿಜೆಪಿಗೆ ಬಿಗ್‌ ಶಾಕ್‌

ಬಿಜೆಪಿ ಸರ್ಕಾರದ ಈ ಕ್ರೂರ ನಡೆಯನ್ನು ಖಂಡಿಸುತ್ತಾ, ರೈತರ ಎಲ್ಲಾ ಬೆಳೆಗಳಿಗೂ ಕಾನೂನಿನ ಮೂಲಕ ಗ್ಯಾರೆಂಟಿಯಾದ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಒಕ್ಕೂಟ ಸರಕಾರ ಶಾಸನ ರೂಪಿಸುವಂತೆ ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ವಿಧಾನ ಸಭೆಯ ನಿರ್ಣಯದ ಮೂಲಕ ಒಕ್ಕೂರಲಿನಿಂದ ಒತ್ತಾಯಿಸುತ್ತದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

 

Trending News