ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯ

ಕೊಪ್ಪಳ (ಗಂಗಾವತಿ): ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.

Written by - Prashobh Devanahalli | Last Updated : Apr 30, 2024, 10:13 PM IST
    • ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ
    • ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ
    • ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ
ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ನೋಡಿಲ್ಲ: ಸಿಎಂ ಸಿದ್ದರಾಮಯ್ಯ title=
CM Siddaramaiah

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ನುಡಿದರು.

ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ:  T20 ವಿಶ್ವಕಪ್ ತಂಡದಿಂದ ಹೊರಬಿದ್ದ ಭಾರತದ ಐವರು ಸ್ಟಾರ್ ಆಟಗಾರರು ಇವರೇ! ಚಾನ್ಸ್ ಮಿಸ್ ಆಗಲು ಕಾರಣ?

ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು  ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು.

ಗಂಗಾವತಿ ನನಗೆ ಮನೆ ಇದ್ದಂತೆ

ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ ಗೆಲ್ಲಿಸಿ ಎಂದು ಕರೆ ನೀಡಿದರು.

ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಸುಳ್ಳು ಪತ್ರಿಕಾ ಜಾಹಿರಾತು ಮೂಲಕ ದಲಿತರ ಹಾದಿ ತಪ್ಪಿಸುತ್ತಿದೆ. ಶ್ರಮಿಕರು, ದುಡಿಯುವ ವರ್ಗಗಳು, ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬವ ಕೆಲಸ ಮಾಡುತ್ತಿದ್ದೇವೆ. ನೀವು ನಮಗೆ ಈ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಕೊಡಿ ಎಂದರು.

ಹತ್ತತ್ತು ವರ್ಷ ಪ್ರಧಾನಿ ಆಗಿ ಮೋದಿಗೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲು ಸಾಧ್ಯವಾಗಲಿಲ್ಲ. ಬರೀ ಸುಳ್ಞು ಹೇಳ್ಕೊಂಡು ತಿರುಗಿದ್ರು. ನಾನು ಈ ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗಗಳ ಮತ್ತು ಎಲ್ಲಾ ಧರ್ಮಗಳ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು 2 ಕೆಜಿ ಕಡಿತ ಮಾಡಿತ್ತು. ನಾವು ಮತ್ತೆ ಅಧಿಕಾರಕ್ಕೆ ಬಂದು 10kg ಗೆ ಹೆಚ್ಚಿಸಿದ್ದೇವೆ. ಇದು ಕಾಂಗ್ರೆಸ್ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸರ್ಕಾರ ಜಾರಿಗೆ ತಂದಿದ್ದ ಆಹಾರ ಭದ್ರತಾ ಕಾಯ್ದೆ ಯ ಫಲ ಎಂದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭಾರತದ ವಿದ್ಯಾವಂತ ಯುವ ಸಮೂಹವನ್ನು ನಂಬಿಸಿದ ಮೋದಿ ಈಗ ಪಕೋಡ ಮಾರಿ ಎಂದು ಹೇಳಿ ಮೂರು ನಾಮ ಬಳಿದಿದ್ದಾರೆ. ಬೆಲೆ ಏರಿಕೆಗೆ ಬ್ರೇಕ್ ಹಾಕ್ತೀನಿ ಎಂದು ನಂಬಿಸಿ ಭಾರತೀಯರಿಗೆ ಮೂರು ನಾಮ ಹಾಕಿದ ಮೋದಿ ಮುಖ ನೋಡಿ ಮತ ಹಾಕಿದ್ರೆ ಆ ಮತಕ್ಕೆ ಗೌರವ ಬರುತ್ತಾ? ಮೋದಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಮಧ್ಯಮ ವರ್ಗ ಮತ್ತು ಬಡವರಿಗೆ ಸ್ಪಂದಿಸುವ ಸಲುವಾಗಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು ಎಂದು ನುಡಿದರು.

ಇದನ್ನೂ ಓದಿ: 2 ವರ್ಷಗಳಲ್ಲಿ ಬದಲಾಯ್ತು T20 ವಿಶ್ವಕಪ್ ತಂಡ! ಅಂದು ಮಿಂಚಿದ್ದ 7 ಆಟಗಾರರಿಗೆ ಇಲ್ಲ ಸ್ಥಾನ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು. ಇದೇ ಕೆಲಸ ಬೊಮ್ಮಾಯಿ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದೂ ಏಕೆ ಮಾಡಲಿಲ್ಲ? ರಿಪಬ್ಲಿಕ್ ಆಫ್ ಬಳ್ಳಾರಿ ಎನ್ನುವ ಅಪಕೀರ್ತಿಗೆ ಕಾರಣರಾದ ಜನಾರ್ಧನ ರೆಡ್ಡಿಯವರನ್ನು ಗೆಲ್ಲಿಸಿ ಮಾಡಿದ ತಪ್ಪು ಲೋಕಸಭೆಯಲ್ಲಿ ಮರುಕಳಿಸಬಾರದು. ಅನ್ಸಾರಿ ಗೆದ್ದಿದ್ರೆ ನಮ್ಮ ಸರ್ಕಾರದಲ್ಲಿ ಮಂತ್ರಿ ಆಗಿರ್ತಾ ಇದ್ರು. ಪಕ್ಷದಿಂದ ಪಕ್ಷಕ್ಕೆ ಪದೇ ಪದೇ ಹಾರುವವರನ್ನು ಬೆಳೆಸಬೇಡಿ‌. ಜನಾರ್ದನ ರೆಡ್ಡಿಯವರ ಸುಳ್ಳುಗಳನ್ನು ನಂಬಬೇಡಿ ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News