ಅಂತರರಾಜ್ಯ ಅಡಿಕೆ ವ್ಯಾಪಾರಿಯಿಂದ 1 ಕೋಟಿ ಕಳ್ಳತನ ಪ್ರಕರಣ: ಡ್ರೈವರ್ ಸೇರಿ ಮೂವರ ಬಂಧನ!

Betelnut trader 1 Crore Money Theft Case: ಅಕ್ಟೋಬರ್ 7ರಂದು ಉಮೇಶ್ ಅವರು ಅಡಿಕೆ ವ್ಯಾಪಾರಕ್ಕಾಗಿ ನೀಲಿ ಬಣ್ಣದ ಬ್ಯಾಗಿನಲ್ಲಿ 1 ಕೋಟಿ ರೂ.ವನ್ನು ತಮ್ಮ ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಚಿತ್ರದುರ್ಗದಲ್ಲಿ ಅಡಿಕೆ ಖರೀದಿಸಲು ಬಂದಿದ್ದರು.

Written by - Puttaraj K Alur | Last Updated : Nov 2, 2023, 01:07 PM IST
  • ಅಂತರರಾಜ್ಯ ಅಡಿಕೆ ವ್ಯಾಪಾರಿಯಿಂದ 1 ಕೋಟಿ ರೂ.‌ ಕಳ್ಳತನ ಪ್ರಕರಣ
  • ವ್ಯಾಪಾರಿ ಕಾರು ಚಾಲಕ ಸಂತೋಷ್ ಸೇರಿ ಮೂವರು ಆರೋಪಿಗಳ ಬಂಧನ
  • ಚಿತ್ರದುರ್ಗದಿಂದ ವಿವಿಧ ಜಿಲ್ಲೆಗಳ ಅಡಿಕೆ ಖರೀದಿಗೆ ಕಾರಿನಲ್ಲಿ ತಂದಿದ್ದ ಹಣ
ಅಂತರರಾಜ್ಯ ಅಡಿಕೆ ವ್ಯಾಪಾರಿಯಿಂದ 1 ಕೋಟಿ ಕಳ್ಳತನ ಪ್ರಕರಣ: ಡ್ರೈವರ್ ಸೇರಿ ಮೂವರ ಬಂಧನ! title=
ಮೂವರು ಆರೋಪಿಗಳ ಬಂಧನ!

ಬೆಂಗಳೂರು: ಅಂತರರಾಜ್ಯ ಅಡಿಕೆ ವ್ಯಾಪಾರಿಯಿಂದ 1 ಕೋಟಿ ರೂ.‌ ಕಳ್ಳತನ ಪ್ರಕರಣ ಸಂಬಂಧ ಕಾರು ಚಾಲಕ ಸಂತೋಷ್ ಸೇರಿ ಮೂವರು ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.  

ಅಕ್ಟೋಬರ್ 7ರಂದು ಉಮೇಶ್ ಅವರು ಅಡಿಕೆ ವ್ಯಾಪಾರಕ್ಕಾಗಿ ನೀಲಿ ಬಣ್ಣದ ಬ್ಯಾಗಿನಲ್ಲಿ 1 ಕೋಟಿ ರೂ.ವನ್ನು ತಮ್ಮ ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಚಿತ್ರದುರ್ಗದಲ್ಲಿ ಅಡಿಕೆ ಖರೀದಿಸಲು ಬಂದಿದ್ದರು. ಆದರೆ ಉಮೇಶ್​​ ಅವರಿಗೆ ಅಲ್ಲಿ ಅಡಿಕೆ ಸಿಕ್ಕಿರಲಿಲ್ಲ.

ಇದನ್ನೂ ಓದಿ: ಸ್ವಿಗ್ಗಿ, ಜೊಮಾಟೋಗಿಂತ ಕಡಿಮೆ ದರದಲ್ಲಿ ಫುಡ್‌ ಡೆಲಿವರಿ ಮಾಡುತ್ತೆ ONDC: ಕಾರಣವೇನು ಗೊತ್ತಾ?

ಬಳಿಕ ಉಮೇಶ್ ಅವರು ಶಿರಾದಲ್ಲಿ ಅಡಿಕೆ ಖರೀದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ತುಮಕೂರಿನಲ್ಲಿಯಾದರೂ ತಮಗೆ ಅಡಿಕೆ ಸಿಗಬಹುದೆಂದು ಅಲ್ಲಿಗೆ ಹೋದ ಅವರಿಗೆ ನಿರಾಸೆಯಾಗಿತ್ತು. ಅಲ್ಲಿಯೂ ಅಡಿಕೆ ಸಿಗದ ಕಾರಣ ಉಮೇಶ್ ಬೆಂಗಳೂರಿನ ಚಂದ್ರಾಲೇಔಟ್​ನ PGಯಲ್ಲಿರುವ ತಮ್ಮ ಮತ್ತು ತಮ್ಮ ಸ್ನೇಹಿತರ ಮಕ್ಕಳನ್ನು ಭೇಟಿಯಾಗಲು ತೆರಳಿದ್ದರು. ನೇರವಾಗಿ ಗಾಂಧೀ‌ನಗರಕ್ಕೆ ಬಂದ ಅವರು ಹೊಟೇಲ್​​​ ಮುಂಭಾಗ ಕಾರು ನಿಲ್ಲಿಸಿ ಊಟ ಮಾಡಿದ್ದರು.

ಬಳಿಕ ಚಂದ್ರಾಲೇಔಟ್​​ನಲ್ಲಿ ಮಕ್ಕಳನ್ನು ಭೇಟಿಯಾಗಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ವಾಪಸ್ ತೆರಳುತ್ತಾರೆ.​ ಮಾರ್ಗಮಧ್ಯೆ ದಾಬಸ್ ಪೇಟೆಯಲ್ಲಿ ಟೀ ಸೇವಿಸಿದ ಉಮೇಶ್ ಚಿತ್ರದುರ್ಗದಕ್ಕೆ ತೆರಳುತ್ತಾರೆ. ಸಂಜೆ 7:45ರ ವೇಳೆಗೆ ಚಿತ್ರದುರ್ಗದ ಭೀಮಸಮುದ್ರದ ಅಂಗಡಿಗೆ ತೆರಳಿ ಕಾರಿನ ಡಿಕ್ಕಿ ಪರಿಶೀಲಿಸಿದಾಗ ಹಣ ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ದೆಹಲಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಬಳಿಕ ಉಮೇಶ್ ಅವರು​ ವಾರ ಬಿಟ್ಟು ಕಾರು ಡ್ರೈವರ್​​ ಮೇಲೆ ಸಂಶಯ ವ್ಯಕ್ತಪಡಿಸಿ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡು ಸತ್ಯ ಬಾಯಿಬಿಡುತ್ತಾನೆ. ಸದ್ಯ ಪ್ರಕರಣ ಸಂಬಂಧ ಆರೋಪಿಗಳ ನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News