ಎಂ. ಭಕ್ತವತ್ಸಲಂ ನಿಧನಕ್ಕೆ ಸಿಎಂ ಸಂತಾಪ

ಎಂ. ಭಕ್ತವತ್ಸಲಂ ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಅವರು 5 ಭಾರಿ ನಗರಸಭೆ ಅಧ್ಯಕ್ಷರಾಗಿ, ಒಂದು ಬಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು.

Last Updated : Nov 29, 2018, 11:31 AM IST
ಎಂ. ಭಕ್ತವತ್ಸಲಂ ನಿಧನಕ್ಕೆ ಸಿಎಂ ಸಂತಾಪ title=

ಬೆಂಗಳೂರು: ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ಅವರು ಹೃದಯಾಘಾತದಿಂದ ನಿಧನರಾದರೆಂಬ ಸುದ್ದಿ ತಿಳಿದು ತುಂಬಾ ದುಃಖವಾಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. 

ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಅವರು 5 ಭಾರಿ ನಗರಸಭೆ ಅಧ್ಯಕ್ಷರಾಗಿ, ಒಂದು ಬಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು. ಜನಾನುರಾಗಿಯಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು ನಮ್ಮ ಪಕ್ಷದ ಮುಖಂಡರಾಗಿದ್ದರು. ಅವರ ನಿಧನದಿಂದ ಸಾರ್ವಜನಿಕ ಕ್ಷೇತ್ರ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ. 

ಎಂ.  ಭಕ್ತವತ್ಸಲಂ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
 

Trending News