ಸಿಎಂ ಗ್ರಾಮ ವಾಸ್ತವ್ಯ ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಲಿ: ಬಿಎಸ್‌ವೈ

ಗ್ರಾಮದ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸದ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಆಗಿದೆ. ಮೊದಲು ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.

Last Updated : Jun 9, 2019, 05:18 PM IST
ಸಿಎಂ ಗ್ರಾಮ ವಾಸ್ತವ್ಯ ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಲಿ: ಬಿಎಸ್‌ವೈ title=

ಯಾದಗಿರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡುವುದನ್ನು ಬಿಟ್ಟು ಮೊದಲು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರ ಪಾಲಿಗೆ ರಾಜ್ಯ ಸರ್ಕಾರ ಸತ್ತಂತಾಗಿದೆ. ಜಿಲ್ಲೆಯ ಗ್ರಾಮಗಳಲ್ಲಿ ಹಲವು ತಿಂಗಳಿಂದ ಅಂಗವಿಕಲರಿಗೆ, ವೃದ್ಧರಿಗೆ ಪಿಂಚಣಿ ನೀಡಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಅಸಹ್ಯ ಪಡುವಂತಹ ವಾತವರಣ ನಿರ್ಮಾಣವಾಗಿದೆ. ಸಣ್ಣ ಪುಟ್ಟ ಕಾಯಿಲೆ ಎಂದು ಆಸ್ಪತ್ರೆಗೆ ಬಂದವರು ರೋಗಿಗಳಾಗಿ ಹೋಗುತ್ತಾರೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನಹರಿಸದ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಆಗಿದೆ. ಮೊದಲು ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ವರ್ಷಪೂರ್ತಿ ಫೈವ್​​ ಸ್ಟಾರ್​ ಹೋಟೆಲ್​​ನಲ್ಲಿದ್ದು ಈಗ ಗ್ರಾಮ ವಾಸ್ತವ್ಯ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಇಷ್ಟು ದಿನ ಗ್ರಾಮಗಳ ಸಮಸ್ಯೆ ಬಗ್ಗೆ ಅರಿವಿರಲಿಲ್ಲವೇ ಎಂದು ಇದೇ ಸಂದರ್ಭದಲ್ಲಿ ಬಿಎಸ್​​ವೈ ವ್ಯಂಗ್ಯ ಮಾಡಿದರು.

Trending News