ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ :ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಸಿಎಂ ಆದೇಶ

ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮನವಿ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

Written by - Ranjitha R K | Last Updated : Feb 8, 2024, 01:58 PM IST
  • ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ
  • ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಸಿದ್ದರಾಮಯ್ಯ
  • ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದಿದ್ದ ಲಕ್ಷ್ಮೀ ಆರ್ ಹೆಬ್ಬಾಳ್ಕರ್
ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ :ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ಸಿಎಂ ಆದೇಶ  title=

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. 

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ  ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಈ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸುಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಶಿಫಾರಸು ಮಾಡಿದ್ದರು. ಇದೀಗ ಲಕ್ಷ್ಮೀ ಆರ್ ಹೆಬ್ಬಾಳ್ಕರ್  ಶಿಫಾರ ಸ್ಸಿನಂತೆ  ಪ್ರಕರಣದ ತನಿಖೆಯನ್ನು  ಸಿಐಡಿ ಗೆ ವಹಿಸಲಾಗಿದೆ. 

ಇದನ್ನೂ ಓದಿ : ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

 ಫೆ. 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮನವಿ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ  ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು  ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

ಇದನ್ನೂ ಓದಿ : ಇಂದು ಮುಖ್ಯಮಂತ್ರಿಗಳ ರಾಜ್ಯ ಮಟ್ಟದ ಜನತಾದರ್ಶನ ಕಾರ್ಯಕ್ರಮ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News