ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ

CM Siddaramaiah: ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. 

Written by - Prashobh Devanahalli | Last Updated : Aug 19, 2024, 02:44 PM IST
  • ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ
  • ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ title=

ಬೆಂಗಳೂರು : ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಫೋಟೋ ಎಕ್ಸಿಬಿಷನ್ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾನು ಯಾವ ತಪ್ಪನ್ನೂ ಎಸಗಿಲ್ಲ

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ಇದನ್ನೂ ಓದಿ: ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು: ಎಚ್‌.ಸಿ.ಮಹದೇವಪ್ಪ

ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ:

ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ  ಹೋರಾಡುತ್ತೇನೆ ಎಂದರು.

ನನ್ನನ್ನು ರಾಜಕೀಯವಾಗಿ ಮುಗಿಸಬಹುದು ಎಂಬುದು ಭ್ರಮೆ

ಪ್ರತಿಪಕ್ಷಗಳಿಗೆ ಸಿಎಂ ಅವರಿಂದ ಭಯ ಕಾಡುತ್ತಿದ್ದು, ಅವರನ್ನೇ ಗುರಿಮಾಡಿಕೊಂಡು ಆಪಾದನೆ ಮಾಡುತ್ತಿರುವ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದರು.

ಇದನ್ನೂ ಓದಿ:ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News