ಅಮಿತ್ ಶಾ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?

Lok Sabha Elections 2024: ಗೃಹ ಸಚಿವ ಅಮಿತ್  ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ?  ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ವಿರುದ್ಧ ಹರಿಹಾಯ್ದಿದ್ದಾರೆ.   

Last Updated : Apr 2, 2024, 01:35 PM IST
  • ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್ ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ.
  • ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ?
  • ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ? - ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? title=

CM Sidaramaiah: ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ, ಹಿಂದೆ ಬಿಜೆಪಿಯೇ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗಲೂ ಹೀಗೆಯೇ ಅನ್ಯಾಯ ಮಾಡಿದ್ದಿರಿ, ನಿಮಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ?  ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು  ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಗೃಹ ಸಚಿವ ಅಮಿತ್  ಶಾ (Home Minister Amit Shah) ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ?  ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. 

ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.  ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ? ಎಂದು ಸಿಎಂ ಕೇಂದ್ರ ಸರ್ಕಾರ (Central Govt)ವನ್ನು ಪ್ರಶ್ನಿಸಿದ್ದಾರೆ. 

ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ. ಯಾಕೆ?

ಇದನ್ನೂ ಓದಿ- ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ: ಸಿಎಂ ಸಿದ್ದರಾಮಯ್ಯ

ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ (Drought in Karnataka) ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ?

ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು (Vijaya Bank) ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್ (Bank of Baroda). ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತ್ ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?

ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ (KMF of Karnataka) ಅನ್ನು ಗುಜರಾತ್ ನ ಅಮುಲ್ (Amul of Gujarat) ಜೊತೆ ವಿಲೀನಗೊಳಿಸಲು  ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ  ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ? ಗೃಹ ಸಚಿವ ಅಮಿತ್ ಶಹಾ ಅವರೇ,  ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಸಿಎಂ ಆಗ್ರಹಿಸಿದರು. 

ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ.

ಇದನ್ನೂ ಓದಿ- Lok Sabha Election 2024: "ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ"

ರಾಷ್ಟ್ರೀಕೃತ ಬ್ಯಾಂಕ್, ರೈಲ್ವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ಸ್ವಾಮ್ಯದ ಎಲ್ಲ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನೂ ಮಾಧ್ಯಮವಾಗಿ ಬಳಸಲು ಅವಕಾಶ ಇರಬೇಕೆಂಬುದು ಕನ್ನಡಿಗರ ಬಹುವರ್ಷಗಳ ಬೇಡಿಕೆ. ಈ ಅವಕಾಶದಿಂದ ವಂಚಿತರಾದ ಉದ್ಯೋಗಾರ್ಥಿ ಕನ್ನಡಿಗ ಯುವಕಿ-ಯುವತಿಯರು ಉದ್ಯೋಗದಿಂದಲೂ ವಂಚಿತರಾಗಿ ನಿರುದ್ಯೋಗಿಗಳಾಗುತ್ತಿದ್ದಾರೆ. ಇದಕ್ಕೆ ನೀವೇ ಹೊಣೆ ಅಲ್ಲವೇ? ಹಿಂದಿ ಎನ್ನುವುದು ರಾಷ್ಟ್ರಭಾಷೆ ಎನ್ನುವ ಸುಳ್ಳನ್ನು ಮತ್ತೆ ಮತ್ತೆ ಹೇಳಿ ಆ ಭಾಷೆಯನ್ನು ಕನ್ನಡಿಗರ ಮೇಲೆ ಹೇರುತ್ತಿರುವುದು ಯಾಕೆ? ಹಿಂದಿ ರಾಷ್ಟ್ರಭಾಷೆ ಎನ್ನುವುದನ್ನು ಸಂವಿಧಾನ ಹೇಳಿದೆಯೇ? ಹೇಳಿದ್ದರೆ ಸಂವಿಧಾನದ ಯಾವ ಪರಿಚ್ಚೇದಲ್ಲಿ ಹೇಳಲಾಗಿದೆ? ದಯವಿಟ್ಟು ಅದನ್ನು ಕನ್ನಡಿಗರ ಮುಂದೆ ತೆರೆದಿಡಿ.

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಯ ಆಧಾರದಲ್ಲಿ ಮತಕೇಳುವ ವಿಶ್ವಾಸ ನಿಮಗೆ ಇಲ್ಲ. ಮಾಡಿರುವ ತಪ್ಪುಗಳನ್ನು ಒಪ್ಪಿಕೊಳ್ಳುವ ಸಹೃದಯತೆಯೂ ನಿಮಗೆ ಇಲ್ಲ. ರಾಜಕೀಯ ಲಾಭಕ್ಕಾಗಿ ಸಮಾಜದ ಶಾಂತಿ-ಸೌಹಾರ್ದತೆಯನ್ನು ಕೆಡಿಸಬಾರದೆಂಬ ಒಳ್ಳೆಯತನದ ವಿವೇಕವೂ ನಿಮಗೆ ಇಲ್ಲ. ನೀವು ನೀಡಿರುವ ಸಲಹೆಯಂತೆಯೇ ತಾವು ಗಲಭೆ ನಡೆಸುತ್ತಿರುವುದಾಗಿ ಮೈಸೂರಿನ ಮಾಜಿ ಸಂಸದನೊಬ್ಬ ಬಹಿರಂಗ ಹೇಳಿಕೆ ನೀಡಿದ್ದಾನೆ. ನೀವು ಹೋದಲ್ಲಿ ಬಂದಲ್ಲಿ ಗಲಭೆ ನಡೆದು ಶಾಂತಿ ಭಂಗವಾಗುತ್ತಿರುವುದಕ್ಕೆ ಇದೇ ಕಾರಣವೇ?

ಅಮಿತ್ ಶಾ ಅವರೇ, ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ, ಕನ್ನಡಿಗರಿಗೆ ದ್ರೋಹ ಎಸಗಬೇಡಿ, ಕನ್ನಡ ಭಾಷೆಯನ್ನು ತುಳಿಯಲು ಹೋಗಬೇಡಿ, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಲು ಹೋಗಬೇಡಿ. ನಿಮ್ಮ ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು  ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು. ಇದರ ಹೊರತಾಗಿ ಅಡ್ಡಮಾರ್ಗದ ಮೂಲಕ ಚುನಾವಣೆಯನ್ನು ಎದುರಿಸಲು ಹೊರಟರೆ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶವೇ ಲೋಕಸಭಾ ಚುನಾವಣೆಯಲ್ಲಿ ಪುನರಾವರ್ತನೆಯಾಗುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News