ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ

ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Ranjitha R K | Last Updated : Apr 19, 2024, 03:52 PM IST
  • ನಿರುದ್ಯೋಗಿಗಳಿಗೆ ಪಕೋಡ ಮಾರಾಟ ಮಾಡಿ ಎಂದಿದ್ದು ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ?
  • ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ- ಸಿಎಂ ಪ್ರಶ್ನೆ
  • ಮೋದಿಯವರಂತೆ ನಾವು ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ
ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆ title=

ಹಾಸನ :ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ :  ರಸ್ತೆ ವಿಸ್ತರಣೆಗೆ ಅರಮನೆ ಮೈದಾನದ ಖಾಲಿ ಜಾಗ ಬಿಟ್ಟುಕೊಡುವ ಮೂಲಕ ಮಹಾರಾಜರು ಔದಾರ್ಯ ಮೆರೆಯಲಿ: ಎಎಪಿ ಆಗ್ರಹ

ನಿರ್ಮಲಾ ಸೀತಾರಾಮನ್ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದ್ದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ.ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ.ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.  

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದಿರಿ. ಭಾರತೀಯರೆಲ್ಲರೂ ನಂಬಿದರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದರು. ಇದು ವಿದ್ಯಾವಂತ ಯುವಕ-ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ ಎಂದು  ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಇದನ್ನೂ ಓದಿ :  ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶೇ 43% ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.ಮೋದಿ ದರ್ಬಾರ್ ನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿ, ಜಾರಿ ಮಾಡಿದೆವು. ನಾನು ನುಡಿದಂತೆ ನಡೆದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ ಎಂದು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News