ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ

Lok Sabha Elections: ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ‌ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.

Written by - Puttaraj K Alur | Last Updated : May 4, 2024, 08:55 PM IST
  • ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿಗೆ ಕೊಟ್ಟು ನಿಮ್ಮ ವಿಶ್ವಾಸ ಉಳಿಸಿಕೊಂಡಿದ್ದೇವೆ
  • ಪ್ರಧಾನಿ ಮೋದಿಯವರು ಕೊಟ್ಟ ಮಾತಿನಂತೆ ಬೆಲೆಯೇರಿಕೆ ತಡೆಯಲಿಲ್ಲ, ಉದ್ಯೋಗ ಸೃಷ್ಟಿ ಮಾಡಲಿಲ್ಲ
  • ಜನರ ಖಾತೆಗೆ ₹15 ಲಕ್ಷ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ರೈತರನ್ನು ನಂಬಿಸಿದರು
ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ದಾವಣಗೆರೆ: ಪ್ರಧಾನಿ ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಮಾಡಿದ್ದೇನು ಅನ್ನೋದನ್ನು ಭಾರತೀಯರಿಗೆ ತಿಳಿಸಿ ಮತವನ್ನು ಕೇಳುತ್ತಿಲ್ಲ. ಬದಲಿಗೆ ಅವರು ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಶನಿವಾರ ನಡೆದ ʼಪ್ರಜಾಧ್ವನಿ ಜನಸಮಾವೇಶʼದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿದರು. 

ʼದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಪಕ್ಷಕ್ಕೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ವಿನಯ್‌ಗೆ ಓಟು ಹಾಕಿದರೆ, ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು. 

ಇದನ್ನೂ ಓದಿ: Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!

ʼದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಕುಟುಂಬ ಆರಂಭದಿಂದಲೂ ಕಾಂಗ್ರೆಸ್ಸಿನಲ್ಲಿದೆ. ಪ್ರಭಾ ಮಲ್ಲಿಕಾರ್ಜುನ್ ಅತ್ಯಂತ ಉತ್ತಮ‌ ಅಭ್ಯರ್ಥಿ. ಇವರನ್ನು ಗೆಲ್ಲಿಸಿದರೆ ನಾನೇ ಗೆದ್ದ ಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲವೆಂದು ನನ್ನ ಮತ್ತು ಕನಕಗುರುಪೀಠದ ಶ್ರೀ ನಿರಂಜನಾನಂದಪುರಿ ಶ್ರೀಗಳ ಎದುರು ಒಪ್ಪಿಕೊಂಡು ಹೋಗಿದ್ದ ವಿನಯ್ ಆಮೇಲೆ ಉಲ್ಟಾ ಹೊಡೆದು ಮೋಸ ಮಾಡಿದ್ದಾನೆ. ವಿನಯ್‌ಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ, ಏಕೆಂದರೆ ಈತನ‌ ಸ್ಪರ್ಧೆಯಿಂದ ಲಾಭ ಆಗುವುದು ಬಿಜೆಪಿಗೆ. ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ಮುಖ್ಯಮಂತ್ರಿಯಾಗಿ ನನಗಿನ್ನೂ ಹೆಚ್ಚಿನ ಶಕ್ತಿ ಬರುತ್ತದೆ ಎಂದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!

ʼನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿಗೆ ಕೊಟ್ಟು ನಿಮ್ಮ ವಿಶ್ವಾಸ ಉಳಿಸಿಕೊಂಡಿದ್ದೇವೆ. ಪ್ರಧಾನಿ ಮೋದಿಯವರು ಕೊಟ್ಟ ಮಾತಿನಂತೆ ಬೆಲೆಯೇರಿಕೆ ತಡೆಯಲಿಲ್ಲ, ಉದ್ಯೋಗ ಸೃಷ್ಟಿ ಮಾಡಲಿಲ್ಲ, ಜನರ ಖಾತೆಗೆ ₹15 ಲಕ್ಷ ಹಾಕಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ರೈತರನ್ನು ನಂಬಿಸಿದರು. ಆದರೆ ರೈತರ ಖರ್ಚು ೩ ಪಟ್ಟು ಆಗುವಂತೆ ಮಾಡಿ ರೈತರಿಗೂ ದ್ರೋಹ ಮಾಡಿದ್ರು. ಬಿಜೆಪಿಯವರು ನಿಮ್ಮ ಪ್ರತಿಯೊಂದು ಓಟಿಗೂ ದ್ರೋಹ ಬಗೆದಿದ್ದಾರೆ. ಇದೇ ದ್ರೋಹಿಗಳಿಂದ ಮತ್ತೆ ಮತ್ತೆ ಮೋಸ ಹೋಗಬೇಡಿ ಎಂದು ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿಕೊಂಡರು.

ಈ ಚುನಾವಣೆ ನುಡಿದಂತೆ ನಡೆದವರ ಮತ್ತು ನಂಬಿಕೆ ದ್ರೋಹಿಗಳ ನಡುವಿನ ಚುನಾವಣೆ. ನೀವು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕಿ. ನುಡಿದಂತೆ ನಡೆದು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಿಮ್ಮ ಓಟಿನ ಘನತೆ ಹೆಚ್ಚಿಸಿದವರಿಗೆ ನಿಮ್ಮ ಮತ ನೀಡಿ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News