ಮುಖ್ಯಮಂತ್ರಿಗಳ ದೆಹಲಿ ಪ್ರವಾಸ :ಜೂ.29 ಕ್ಕೆ ಪ್ರಧಾನಿಯೊಂದಿಗೆ ಸಿಎಂ ಭೇಟಿ

ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ.ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ  ಕರ್ನಾಟಕ ನಿರೀಕ್ಷೆ ಮಾಡುವ  ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   

Written by - Ranjitha R K | Last Updated : Jun 27, 2024, 02:45 PM IST
  • ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ
  • ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರ ಭೇಟಿ
  • ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ
ಮುಖ್ಯಮಂತ್ರಿಗಳ ದೆಹಲಿ ಪ್ರವಾಸ :ಜೂ.29 ಕ್ಕೆ ಪ್ರಧಾನಿಯೊಂದಿಗೆ ಸಿಎಂ ಭೇಟಿ title=

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಜೂನ್ 29ರಂದು 8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಡಪ್ರಭು ಕೆಂಪೇಗೌಡರ  515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. 

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು, ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು.ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು,ಹಣ ಬಿಡುಗಡೆ ಮಾಡಿಸುವುದು,ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನ ಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ಇದನ್ನೂ ಓದಿ : ಗುಂಡ್ಲುಪೇಟೆಯ 27 ಮಂದಿ ಪೌರ ಕಾರ್ಮಿಕರಿಗೆ ನಿವೇಶನ ಭಾಗ್ಯ

ಕೇಂದ್ರ ಸಚಿವರ ಭೇಟಿ :
ವಿಶೇಷವಾಗಿ ನಮ್ಮ ಸಚಿವರೂ ಕೂಡಾ ಜೊತೆಗೂಡಿದ್ದು,ಪ್ರಧಾನಮಂತ್ರಿ ಭೂಸಾರಿಗೆ ಸಚಿವರು, ರೈಲ್ವೆ, ನೀರಾವರಿ ,ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರ ಭೇಟಿಗೆ  ಇನ್ನೂ ಸಮಯ ನಿಗದಿಮಾಡಿಲ್ಲ, ಶೀಘ್ರವೇ ಮಾಡುತ್ತಾರೆ.ಆದರೆ, ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ.ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ  ಕರ್ನಾಟಕ ನಿರೀಕ್ಷೆ ಮಾಡುವ ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದರು.

ಇದನ್ನೂ ಓದಿ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ

ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೊದಲ ಬಾರಿಗೆ ಲೋಕಸಭಾಧ್ಯಕ್ಷರನ್ನು ಒಟ್ಟಿಗೆ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಧಾನಮಂತ್ರಿ ಹಾಗೂ ವಿಪಕ್ಷ ನಾಯಕ ಜೊತೆಗೆ ಹೋಗಿ ಅವರ ಪೀಠದ ಮೇಲೆ ಕುಳ್ಳಿರಿಸಿ ಶುಭಾಶಯ ಹೇಳುವುದು ಮೊದಲಿನಿಂದಲೂ ನಡೆದುಬಂದಿರುವ ಸಂಪ್ರದಾಯ.ಅದರಂತೆ ನಡೆದುಕೊಂಡಿದ್ದಾರೆ. ನರೇಂದ್ರಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿದ್ದಾರೆ.ರಾಹುಲ್ ಗಾಂಧಿ ಇಡೀ ದೇಶವನ್ನು ಪಾದಯಾತ್ರೆ ಮೂಲಕ ಸುತ್ತಿದ್ದಾರೆ.ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿದೆ.ಈ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News