ದಾವಣಗೆರೆ ಕಾಂಗ್ರೆಸ್ ಕಾರ್ಪೊರೇಟರ್ ಮಗನಿಂದ ಹಲ್ಲೆ; ದೂರು ದಾಖಲು

ಕಾಂಗ್ರೆಸ್ ಕಾರ್ಪೊರೇಟರ್ ಲಿಂಗರಾಜು ಅವರ ಪುತ್ರ ರಾಕೇಶ್ ಈ ಕೃತ್ಯ ಎಸಗಿದ್ದಾನೆ.

Last Updated : Jun 6, 2018, 12:32 PM IST
ದಾವಣಗೆರೆ ಕಾಂಗ್ರೆಸ್ ಕಾರ್ಪೊರೇಟರ್ ಮಗನಿಂದ ಹಲ್ಲೆ; ದೂರು ದಾಖಲು title=

ದಾವಣಗೆರೆ​: ಕಾಂಗ್ರೆಸ್ ಕಾರ್ಪೊರೇಟರ್ ಲಿಂಗರಾಜು ಅವರ ಪುತ್ರ ರಾಕೇಶ್ ತನ್ನ ಗರ್ಲ್ ಫ್ರೆಂಡ್ ಸ್ನೇಹಿತನಿಗೆ ಥಳಿಸಿ ಗಾಯಗೊಳಿಸಿದ ಘಟನೆ ಮಂಗಳವಾರ ದಾವಣಗೆರೆಯ ಕೆಟಿಜೆ ಪೋಲಿಸ್ ಸ್ಟೇಶನ್ ವ್ಯಾಪ್ತಿಯಲ್ಲಿ ನಡೆದಿದೆ. 

ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಕಾರಣಕ್ಕೆ ಹಲ್ಲೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. 

Trending News