ಕಾಂಗ್ರೆಸ್ ಸರ್ಕಾರ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸಿದ್ಧತೆ- ಮಾಜಿ ಪಶುಸಂಗೋಪನಾ ಸಚಿವ

 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಒದ್ದಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

Written by - Zee Kannada News Desk | Last Updated : Jun 22, 2023, 05:39 PM IST
  • ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಕಿಡಿ
  • ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಒದ್ದಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರ ಗ್ರಾಹಕರ ಜೇಬಿಗೆ ಕತ್ತರಿ ಹಾಕಲು ಸಿದ್ಧತೆ-  ಮಾಜಿ ಪಶುಸಂಗೋಪನಾ ಸಚಿವ title=

ಬೆಂಗಳೂರು: ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಒದ್ದಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಹಕಾರ ಸಚಿವ ಕೆ. ಏನ್ ರಾಜಣ್ಣ, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ನೂತನ ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯಕ್ ಒಂದು ಬಾರಿ ಕುಳಿತು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿ ಎಲ್ಲರೂ ಮನಸ್ಸಿಗೆ ತಿಳಿದಂತೆ ಹೇಳುವುದು ಸೂಕ್ತವಲ್ಲ ಇಲಾಖೆಯ ಬಗ್ಗೆ ಅಧ್ಯಯನ ಮಾಡಲಿ, ಈ ತರಹದ ತರಾತುರಿ ನಿರ್ಧಾರಗಳು ಸಾರ್ವಜನಿಕರ ಮೇಲೆ ಎಷ್ಟು ಪ್ರಭಾವ ಬೀರುತ್ತವೆ ಎಂದು ಅರಿತುಕೊಂಡು ನಿರ್ಧಾರ ಕೈಗೊಳ್ಳಲಿ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:Karnataka Bandh: ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್‌ ಗೆ ಕರೆ..!

ಈಗಾಗಲೇ ರಾಜ್ಯದ ಉದ್ಯಮಗಳು ಕರೆಂಟ್ ಬಿಲ್ ಏರಿಕೆಯಿಂದಾಗಿ ತತ್ತರಿಸಿ ಪ್ರತಿಭಟನೆಗೆ ಮುಂದಾಗಿವೆ. ಇಂತಹ ಸಂದರ್ಭದಲ್ಲಿ ಪ್ರತೀ ಲೀಟರ್ಗೆ ರೂ.5 ಹೆಚ್ಚಿಸುವ ಪ್ರಸ್ತಾವನೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಿದೆ ಎಂದು ಅವರು ಕಿಡಿ ಕಾರಿದ್ದಾರೆ.

ನೇರವಾಗಿ ಗ್ರಾಹಕರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ದರ ಏರಿಕೆ ಮಾಡುವ ಮೊದಲು ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಗ್ರಾಹಕರಿಗೆ ಆಗುವ ಈ ಹೊರೆ ರೈತರಿಗೆ ಲಾಭವೇ?

ಕೇವಲ ಗ್ರಾಹಕರಿಗೆ ಹಾಲಿನ ದರ ಏರಿಸಿ ಬಿಸಿ ಮುಟ್ಟಿಸುವುದಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹ ಧನವನ್ನು ಹೆಚ್ಚಿಸಿ. ಪ್ರತಿ ಲೀಟರ್ಗೆ ರೂ. 5 ಹೆಚ್ಚಿಸಬೇಕೆಂಬ ಪ್ರಸ್ತಾವನೆಯಲ್ಲಿ ರೈತರಿಗೆ ಎಷ್ಟು ಪಾಲು ನೀಡಲಾಗುತ್ತದೆ, ರೈತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Karnataka Bandh: ವಿದ್ಯುತ್ ದರ ಹೆಚ್ಚಳಕ್ಕೆ‌ ಖಂಡನೆ.. ಹುಬ್ಬಳ್ಳಿಯಲ್ಲಿ ಬಂದ್ ಯಶಸ್ಸಿ..!

ಇತ್ತೀಚೆಗೆ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಬಮೂಲ್ ಕಡಿತ ಮಾಡಿತ್ತು. ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1.50 ರೂ ಕಡಿತ ಮಾಡಿತ್ತು. ಹಾಲು ಒಕ್ಕೂಟದ ಈ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಸರ್ಕಾರದ ನಡೆ ಗಮನಿಸಿದರೆ ಜನವಿರೋಧಿಯ ಎಲ್ಲ ನೀತಿಗಳನ್ನು ಅನುಸರಿಸುತ್ತಿದೆ ಇದು ಒಳ್ಳೆದಲ್ಲ ಖಂಡನಾರ್ಹವಾದದ್ದು ಎಂದು ಪ್ರಭು ಚವ್ಹಾಣ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News