ಬೆಲೆ ಏರಿಕೆ, ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.

Written by - Prashobh Devanahalli | Last Updated : Aug 23, 2024, 04:49 PM IST
    • ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ
    • ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ
    • ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಟೀಕೆ
ಬೆಲೆ ಏರಿಕೆ, ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರ್ಕಾರದ ಅಜೆಂಡಾ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ title=
File Photo

ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು.

ಇದನ್ನೂ ಓದಿ: ಸಂದರ್ಶನಕ್ಕೆ ಬಂದ ಕ್ರೀಡಾ ನಿರೂಪಕಿಯರ ಅಂದಕ್ಕೆ ಮರುಳಾಗಿ ಅವರನ್ನೇ ಮದುವೆಯಾದ ಕ್ರಿಕೆಟಿಗರು

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.

ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಸರಕಾರದಲ್ಲಿ ಒಂದು ರೀತಿಯ ರಾಜಕೀಯ ಅಸ್ಥಿರತೆ ಕಾಣುತ್ತಿದೆ. ಸ್ವತಃ ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನದಲ್ಲಿದ್ದಾರೆ. ಸಿಎಂ ಸೇರಿ ಉಳಿದೆಲ್ಲ ಸಚಿವರೂ ಜನಕಲ್ಯಾಣದ ಯೋಜನೆಗಳನ್ನು ಕೈಬಿಟ್ಟಿದ್ದು, ಕೋಮಾ ಪರಿಸ್ಥಿತಿಯಲ್ಲಿ ಸರಕಾರ ಇದೆ ಎಂದು ಟೀಕಿಸಿದರು. ಸಚಿವರು ಜಿಲ್ಲಾ ಪ್ರವಾಸ ನಡೆಸುತ್ತಿಲ್ಲ; ಸಭೆಗಳನ್ನೂ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿದರು.

ಜನರ ಬವಣೆಗಳನ್ನು ಕೇಳದೇ ಇರುವ ಸ್ಥಿತಿ ಎಲ್ಲ ಜಿಲ್ಲೆ, ಎಲ್ಲ ತಾಲ್ಲೂಕುಗಳಲ್ಲಿದೆ. ಸರಕಾರವೊಂದು ಜೀವಂತವಾಗಿದೆ ಎಂದು ಅನಿಸುತ್ತಿಲ್ಲ. ಆಡಳಿತ ಪಕ್ಷದ ಸದಸ್ಯರೇ ಬೇರೆಬೇರೆ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಜನರ ಪರವಾಗಿ ಯೋಚಿಸದ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾದುದು ಶೋಚನೀಯ ಎಂದು ತಿಳಿಸಿದರು.

ಇದನ್ನೂ ಓದಿ: 500 ರೂಪಾಯಿ ನೋಟಿನ ಕಂತೆಗಳನ್ನು ದಾರಿಯುದ್ದಕೂ ಎಸೆದ Youtuber? ಯಾರು ಗೊತ್ತಾ ಆ ಸಿರಿವಂತ ? 

ನಾವು ರಾಜ್ಯ ಸರಕಾರ ಪತನ ಆಗಬೇಕೆಂದು ಬಯಸುತ್ತಿಲ್ಲ. ಗುರುತರ ಆರೋಪಕ್ಕೆ ಒಳಗಾದ ಮುಖ್ಯಮಂತ್ರಿಗಳು ತನಿಖೆ ಮುಗಿಯುವವರೆಗೆ ರಾಜೀನಾಮೆ ಕೊಡಬೇಕು ಹಾಗೂ ತನಿಖೆ ಎದುರಿಸಲಿ ಎಂದು ನಾವು ಆಗ್ರಹಿಸುತ್ತಿದ್ದೇವೆ ಎಂದು ವಿ.ಸುನೀಲ್‍ಕುಮಾರ್ ಅವರು ಸ್ಪಷ್ಟಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News