ಕನ್ನಡಿಗರ ಮೇಲೆ ಕಾಂಗ್ರೆಸ್ ಸರ್ಕಾರದಿಂದ ಮಲತಾಯಿ ಧೋರಣೆ: ಬಿಜೆಪಿ ಆರೋಪ

Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

Written by - Puttaraj K Alur | Last Updated : Aug 23, 2023, 01:53 PM IST
  • ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಮಲತಾಯಿ ಧೋರಣೆ ತೋರುತ್ತಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ
  • ಕೃಷಿ ಸಚಿವ ಚೆಲುವರಾಯಸ್ವಾಮಿ ನಮ್ಮ ರೈತರಿಗೆ ಹೊಸ ಬೆಳೆ ಬೆಳೆಯದಂತೆ ಎಚ್ಚರಿಕೆ ಕೊಟ್ಟಿರುವುದು ದುರಂತ
  • ಕಾವೇರಿ ನೀರಿನ ಪ್ರತಿ ಹನಿಯವರೆಗೂ ರಾಜ್ಯದ ಜನತೆಗೆ ಮಾಡಿದ ಮಹಾದ್ರೋಹಗಳ ಪಟ್ಟಿ ದೊಡ್ಡದಿದೆ
ಕನ್ನಡಿಗರ ಮೇಲೆ ಕಾಂಗ್ರೆಸ್ ಸರ್ಕಾರದಿಂದ ಮಲತಾಯಿ ಧೋರಣೆ: ಬಿಜೆಪಿ ಆರೋಪ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಮಲತಾಯಿ ಧೋರಣೆ ತೋರುತ್ತಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ. ತಮಿಳುನಾಡಿಗೆ ಅಗತ್ಯಕ್ಕಿಂತಲೂ ದುಪ್ಪಟ್ಟು ನೀರು ಬಿಟ್ಟಿದ್ದು ಅಲ್ಲದೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ನಮ್ಮ ರೈತರಿಗೆ ಹೊಸ ಬೆಳೆ ಬೆಳೆಯದಂತೆ ಎಚ್ಚರಿಕೆ ಕೊಟ್ಟಿದ್ದಾರೆಂದರೆ ಇದೆಂಥಾ ದುರಂತ..!’ವೆಂದು ಟೀಕಿಸಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಮತ್ತಷ್ಟು ʼಕಾವೇರಿʼದ ರೈತರದ ಪ್ರತಿಭಟನೆ

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಮುಂಗಾರು ಕೈಕೊಟ್ಟು ರಾಜ್ಯದಲ್ಲಿ ಬರದ ಛಾಯೆ ಆವರಿಸತೊಡಗಿತು. ತಕ್ಷಣಕ್ಕೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಿದ್ದ ಸಿಎಂ ಸಿದ್ದರಾಮಯ್ಯರ ಸರ್ಕಾರ, ವರ್ಗಾವಣೆ ದಂಧೆ, ಮರಳು ಮಾಫಿಯಾ, ಬೆಲೆ ಏರಿಕೆಯಲ್ಲೇ ಆಸಕ್ತಿ ತೋರಿಸಿ ಕಾಲಹರಣ ಮಾಡಿತು. ಇದೀಗ 120 ತಾಲೂಕುಗಳಲ್ಲಿ ಬರ ಬಂದಿದೆ. ಆದರೂ ಇನ್ನು ಸಮೀಕ್ಷೆ, ಸಂಶೋಧನೆ ಅಂತಾ #ATMSarkara ಕಾಲ ಕಳೆಯುತ್ತ ಅನ್ನದಾತನ ಬದುಕನ್ನು ದುಸ್ತರವಾಗಿಸಿದೆ’ ಎಂದು ಬಿಜೆಪಿ ಕುಟುಕಿದೆ.

‘ಅಕ್ಕಿ, ದುಡ್ಡು, ಜ್ಯೋತಿ ಎಂದೆಲ್ಲಾ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಅನ್ನದ ಪ್ರತಿ ಅಗುಳಿನಿಂದ ಹಿಡಿದು ಕಾವೇರಿ ನೀರಿನ ಪ್ರತಿ ಹನಿಯವರೆಗೂ ರಾಜ್ಯದ ಜನತೆಗೆ ಮಾಡಿದ ಮಹಾದ್ರೋಹಗಳ ಪಟ್ಟಿಯ ವಿಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ.  

ಇದನ್ನೂ ಓದಿ: ಬೆಂಗಳೂರು, ತುಮಕೂರು ಸೇರಿದಂತೆ 14 ಸ್ಥಳಗಳಲ್ಲಿ ಮೆಗಾ ರೇಡ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News