ಗ್ಯಾರಂಟಿ ಯೋಜನೆ ರದ್ದು, ಕಾಂಗ್ರೆಸ್ ಪಕ್ಷದ ರಹಸ್ಯ ಚರ್ಚೆ ಬಯಲು : ಹೆಚ್‌ಡಿಕೆ

ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್  ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು ಎಂದು ರಾಜ್ಯ ಕಾಂಗ್ರೆಸ್‌ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

Written by - Krishna N K | Last Updated : Feb 1, 2024, 05:54 PM IST
  • ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು
  • ಮಾಗಡಿ ಶಾಸಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿ
  • ಇದು ಬ್ಲಾಕ್ ಮೇಲ್ ರಾಜರಾರಣ ಎಂಬುದರಲ್ಲಿ ಸಂಶಯವಿಲ್ಲ ಎಂದ ಮಾಜಿ ಸಿಎಂ
ಗ್ಯಾರಂಟಿ ಯೋಜನೆ ರದ್ದು, ಕಾಂಗ್ರೆಸ್ ಪಕ್ಷದ ರಹಸ್ಯ ಚರ್ಚೆ ಬಯಲು : ಹೆಚ್‌ಡಿಕೆ title=

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು ಎಂದು ಮಾಗಡಿ ಶಾಸಕರು ಹೇಳಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ಬ್ಲಾಕ್ ಮೇಲ್ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹೇಳಿಕೆಯನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು. ಇದು ಬ್ಲಾಕ್ ಮೇಲ್ ರಾಜರಾರಣ ಎಂಬುದರಲ್ಲಿ ಸಂಶಯವಿಲ್ಲ. ಅವರ ಮಾತಿಗೆ ಪ್ರಾಶಸ್ತ್ಯ ಕೊಡುವುದು ಅನಾವಶ್ಯಕ ಎಂದರು.

ಇದನ್ನೂ ಓದಿ:ಕಳಪೆ ಕಾಮಗಾರಿ ನಡೆದರೆ ಅಧಿಕಾರಿಗಳೇ ಹೊಣೆ: ಎನ್.ಚಲುವರಾಯಸ್ವಾಮಿ ಎಚ್ಚರಿಕೆ

ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್  ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು. ಆ ಗಿಫ್ಟ್ ಕಾರ್ಡ್ ಕೊಟ್ಟು ಜನರನ್ನು ವಂಚಿಸಿದ್ದಾರೆ. ಈ ಗ್ಯಾರಂಟಿ ಯೋಜನೆಗಳೂ ಅದೇ ರೀತಿ ಎಂದು ನೇರವಾಗಿ ಆರೋಪ ಮಾಡಿದರು ಕುಮಾರಸ್ವಾಮಿ.

ಈ ಗ್ಯಾರಂಟಿಗಳು ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತವೆ. ಪಕ್ಷದ ಮಟ್ಟದಲ್ಲಿ ಅಗಿರುವ ಚರ್ಚೆ ಬಗ್ಗೆ ಈ ವ್ಯಕ್ತಿ ಜನರ ಎದುರು ಹೇಳಿದ್ದಾರೆ. ಇವರೆಲ್ಲ ಇದನ್ನೆ ಚರ್ಚೆ ಮಾಡಿದ್ದಾರೆ. ಪಾರ್ಲಿಮೆಂಟ್ ವರೆಗೂ ಗ್ಯಾರಂಟಿ ಕೊಡೊಣ, ಬಳಿಕ ನಿಲ್ಲಿಸೋಣ ಎಂಬ ಚರ್ಚೆ ಆಗಿದೆ. ಅವರ ಒಳಗಡೆಯ ಚರ್ಚೆ ಇಲ್ಲಿ ಬಯಲಾಗಿದೆ. ಪಕ್ಷದ ರಹಸ್ಯ ರಿವೀಲ್ ಆಗಿದೆ ಎಂದು ಹೇಳಿದರು ಅವರು.

ಇದನ್ನೂ ಓದಿ:ಒಂದು ಕೋಟಿ ಮನೆಗೆ 300 ಯೂನಿಟ್‌ ವಿದ್ಯುತ್‌ ಉಚಿತ

ಸಮರ್ಪಕವಾಗಿ ಗ್ಯಾರಂಟಿ ಕೊಡಲು ಅವಕಾಶ ಇದೆ. ಅದೇನು ಅಂತಹ ದೊಡ್ಡ ಕಾರ್ಯಕ್ರಮ ಅಲ್ಲ, ಕೊಡಲು ಸಮಸ್ಯೆಯೂ ಇಲ್ಲ. ಸರಿಯಾದ ಮಾರ್ಗದಲ್ಲಿ ಹೋಗಿದಿದ್ದರೆ ಈ ಐದು ಗ್ಯಾರಂಟಿಗಳನ್ನ ಕೊಟ್ಟು, ರಾಜ್ಯದ ಅಭಿವೃದ್ಧಿ ಸಹ ಮಾಡಬಹುದಿತ್ತು. ಅದು ಇವರ ತಪ್ಪುಗಳಿಂದ ಹೀಗೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ಬಿಜೆಪಿಯವರು ಅಕ್ಷತೆಗೆ ಜನರು ಮತ ಹಾಕುವುದಾದರೆ ಅದನ್ನು ಕಾಂಗ್ರೆಸ್ ನವರೂ ಮಾಡಲಿ. ಬೇಡ ಎಂದವರು ಯಾರು? ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ ಮಾಜಿ ಸಿಎಂ; ಅವರ ಅಕ್ಷತೆಗೆ ಜನ ಓಟ್ ಹಾಕಿದರೆ ನಿಮ್ಮ ಅಕ್ಷತೆಗೆ ಜನ ಓಟ್ ಹಾಕಲ್ವಾ? ನೀವೂ ಒಂದು ಪ್ರಯೋಗ ಮಾಡಿ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News