ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿದ ಬಿಜೆಪಿಯ ಹೀನ ರಾಜಕೀಯ: ಕಾಂಗ್ರೆಸ್ ಆಕ್ರೋಶ

Karnataka Anna Bhagya Scheme: ಕೇಂದ್ರ ಸರ್ಕಾರದ ಧೋರಣೆಯು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ರಾಜ್ಯಗಳಿಂದಲೇ ಸಂಗ್ರಹಿಸಿದ ಅಕ್ಕಿಯನ್ನು ರಾಜ್ಯಗಳಿಗೆ ಕೊಡುವುದಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Zee Kannada News Desk | Last Updated : Jun 21, 2023, 02:40 PM IST
  • ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ
  • FCIನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ
  • ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ
ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿದ ಬಿಜೆಪಿಯ ಹೀನ ರಾಜಕೀಯ: ಕಾಂಗ್ರೆಸ್ ಆಕ್ರೋಶ title=
ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ!

ಬೆಂಗಳೂರು: ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಅಕ್ಕಿ ಖರೀದಿ ವಿಚಾರವಾಗಿ ಕೇಂದ್ರದ ಬಿಜೆಪ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

‘FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCIನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ವಿಶ್ವದ ಮಾನಸಿಕ ಆರೋಗ್ಯಕ್ಕೆ ಯೋಗ ಮದ್ದು: ಯೋಗ ನಮ್ಮ ಸಂಸ್ಕೃತಿಯ ಹೆಮ್ಮೆಯ ಕೊಡುಗೆ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಆಶೀರ್ವಾದ ಕಳೆದುಕೊಳ್ಳುವಿರಿ ಎಂದು ಕನ್ನಡಿಗರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಂದು ಹೇಳಿದಂತೆಯೇ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದೆ. ಕೇಂದ್ರ ಸರ್ಕಾರದ ಧೋರಣೆಯು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ರಾಜ್ಯಗಳಿಂದಲೇ ಸಂಗ್ರಹಿಸಿದ ಅಕ್ಕಿಯನ್ನು ರಾಜ್ಯಗಳಿಗೆ ಕೊಡುವುದಿಲ್ಲ ಎಂದರೆ ಏನರ್ಥ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಬಿಜೆಪಿ ಪ್ರತಿಭಟಿಸುತ್ತಿರುವುದು ಯಾವ ಕಾರಣಕ್ಕೆ? ಅವರಿಗೇ ಸ್ಪಷ್ಟತೆ ಇದ್ದಂತಿಲ್ಲ! ಪ್ರತಿಭಟಿಸುವುದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ. ಕನ್ನಡಿಗರಿಗೆ ಅಕ್ಕಿ ನೀಡದೆ ವಂಚಿಸಿದ್ದಕ್ಕೆ, ನೆರೆ ಪರಿಹಾರ ನೀಡದೆ ದ್ರೋಹವೆಸಗಿದ್ದಕ್ಕೆ ಮತ್ತು ಕರ್ನಾಟಕದ ಸಂಕಷ್ಟಕ್ಕೆ ಸ್ಪಂದಿಸದಿರುವುದಕ್ಕೆ. ಪ್ರಧಾನಿ ಮೋದಿ ವಿರುದ್ಧ ಪ್ರತಿಭಟಿಸಲಿ’ ಎಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: 30 ದಿನ ರಜೆ ಕೊಡಿ, ಇಲ್ಲಂದ್ರೆ ಒತ್ತಡದಲ್ಲಿ ಏನಾದ್ರು ಆದ್ರೆ ನೀವೇ ಜವಾಬ್ದಾರಿ!

ರಾಜ್ಯದಲ್ಲಿ ಅಕ್ಕಿ ರಾಜಕೀಯ!: ‘ಅನ್ನಭಾಗ್ಯ’ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೋರಾಟ ಮಾಡುತ್ತಿದೆ. ಇತ್ತ ಬಿಜೆಪಿ ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಎಂದು ಪ್ರತಿಭಟನೆಗೆ ಮುಂದಾಗಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೇವೆಂದು ಹೇಳಿ ಇದೀಗ ಕೊಡ್ತಿಲ್ಲವೆಂದು ಸಿದ್ದರಾಮಯ್ಯ ಸರ್ಕಾರ ಆರೋಪಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News