ಸಿಎಂ - ಡಿಸಿಎಂ ವಿರುದ್ಧ ಹರಿಹಾಯ್ದ ಗುತ್ತಿಗೆದಾರರು - ಹಣ ಬಿಡುಗಡೆಗೆ ೧೫ ದಿನಗಳ ಗಡುವು, ಹೋರಾಟದ ಎಚ್ಚರಿಕೆ

ಬಿಜೆಪಿ ಸರ್ಕಾರ ಶೇ. 40ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷ ಈಗ ಮಾಡುತ್ತಿರುವುದಾದರು ಏನು? ಎಂದು ಅವರು ಪ್ರಶ್ನೆ ಮಾಡಿದ್ದರೆ.

Written by - Ranjitha R K | Last Updated : Jul 12, 2024, 04:36 PM IST
  • ಬಾಕಿ ಹಣ ಬಿಡುಗಡೆಗೆ ಒತ್ತಾಯ
  • ಸರ್ಕಾರದ ವಿರುದ್ದ ಗುತ್ತಿಗೆದಾರರ ಆಕ್ರೋಶ
  • ಹೋರಾಟದ ಎಚ್ಚರಿಕೆ ನೀಡಿದ ಗುತ್ತಿಗೆದಾರರು
ಸಿಎಂ - ಡಿಸಿಎಂ ವಿರುದ್ಧ ಹರಿಹಾಯ್ದ ಗುತ್ತಿಗೆದಾರರು - ಹಣ ಬಿಡುಗಡೆಗೆ ೧೫ ದಿನಗಳ ಗಡುವು, ಹೋರಾಟದ ಎಚ್ಚರಿಕೆ title=

ಶಿವಮೊಗ್ಗ : ಸರ್ಕಾರದಿಂದ ಬರಬೇಕಾದ ಗುತ್ತಿಗೆದಾರರ ಬಾಕಿ ಮೊತ್ತವನ್ನು 15 ದಿನಗಳಲ್ಲಿ ಬಿಡುಗಡೆ ಮಾಡದೇ ಇದ್ದರೆ ರಾಜ್ಯಾದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಶಶಿಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಇಲಾಖೆಗಳಿಗೆ ಕಾಮಗಾರಿಗೆ ಸಂಬಂಧ ಪಟ್ಟಂತೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣವಿಲ್ಲವೆಂದು ಸಬೂಬು ಹೇಳಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದರಲ್ಲಿಯೇ ಕಾಲ ಕಳೆಯುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ : ಮೂಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿ ಸರ್ಕಾರ ಶೇ. 40ರಷ್ಟು ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷ ಈಗ ಮಾಡುತ್ತಿರುವುದಾದರು ಏನು? ಎಂದು ಅವರು ಪ್ರಶ್ನೆ ಮಾಡಿದ್ದರೆ. ದಲಿತರ ಪರವಾಗಿ ಸರ್ಕಾರವಿದೆ ಎಂದು ಹೇಳುವ ಕಾಂಗ್ರೆಸ್ ದಲಿತರಿಗಾಗಿ ಮೀಸಲಿಟ್ಟ ಹಣವನ್ನೇ ಇತರ ಇಲಾಖೆಗಳಿಗೆ ವರ್ಗಾವಣೆ ಮಾಡುತ್ತಿದೆ.ಹೊಸ ಕಾಮಗಾರಿಗಳು ಕೂಡ ಇಲ್ಲವಾಗಿದೆ. ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ತುಂಗಾ ಮೇಲ್ದಂಡೆ ಯೋಜನೆಯಡಿಯಲ್ಲಿ ಕಾಮಗಾರಿ ನಿರ್ವಹಣೆ ಮಾಡಿ 2 ವರ್ಷವಾದರೂ ಹಣ ಬಿಡುಗಡೆ ಮಾಡಿಲ್ಲ.ಕೇವಲ ಶೇ.30ರಷ್ಟು ಮಾತ್ರ ಮಾಡಿರುತ್ತಾರೆ.ಹಿಂದಿನ ಸರ್ಕಾರ ಕೂಡಾ ಗುತ್ತಿಗೆದಾರರನ್ನು ಕಡೆಗಾಣಿಸಿತ್ತು ಎಂದು ದೂರಿದ್ದಾರೆ.

ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದಾರೆ, ಬ್ಯಾಂಕ್ ಹಣಕಾಸು ಸಂಸ್ಥೆಗಳಿಂದ ಸಾಲ ಓಡಿಗಳನ್ನು ಪಡೆದು ತೀರಿಸಲು ಸಂಕಷ್ಟ ಪಡುತ್ತಿದ್ದಾರೆ.ಗುತ್ತಿಗೆದಾರನಿಗೆ ಸಿಗಬೇಕಾದ ಯಾವ ವ್ಯತ್ಯಾಸದ ಹಣಗಳು ಕೂಡ ಬಿಡುಗಡೆಯಾಗುತ್ತಿಲ್ಲ.ಇದೀಗ ಗುತ್ತಿಗೆದಾರರಿಗೆ ಆತ್ಮಹತ್ಯೆ ಅನಿವಾರ್ಯವಾಗಿದೆ.ಹೀಗಾಗಿ ಸರ್ಕಾರ ಕೂಡಲೇ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಹಣವನ್ನು ಇನ್ನೂ 15 ದಿನಗಳಲ್ಲಿ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ :ಅಪ್ಪಟ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News