ಉಗ್ರರ ಆತ್ಮಾಹುತಿ ದಾಳಿಗೆ ಮಂಡ್ಯದ ವೀರಯೋಧ ಹುತಾತ್ಮ

ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯೋಧ ಗುರು.

Last Updated : Feb 15, 2019, 08:23 AM IST
ಉಗ್ರರ ಆತ್ಮಾಹುತಿ ದಾಳಿಗೆ ಮಂಡ್ಯದ ವೀರಯೋಧ ಹುತಾತ್ಮ title=
Pic Courtesy: Reuters

ಮಂಡ್ಯ: ಪುಲ್ವಾಮಾದಲ್ಲಿ ನಿನ್ನೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಲ್ಲಿ ಮಂಡ್ಯದ ಯೋಧ ಎಚ್.ಗುರು(33) ಕೂಡ ಸೇರಿದ್ದಾರೆ.

ಕಳೆದ 10 ವರ್ಷಗಳಿಂದ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗುರು 5 ವರ್ಷಗಳಿಂದ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸಿದ್ದರು. ಮೊದಲು ಅವರು ಜಾರ್ಖಂಡ್‌ನಲ್ಲಿ 94 ನೇ ಬೆಟಾಲಿಯನ್‌ನಲ್ಲಿದ್ದರು. ಬಳಿಕ 82ನೇ ಬೆಟಾಲಿಯನ್‌ ಸೇರಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆಗೆ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ತಿಂಗಳ ಹಿಂದೆ ರಜೆಗಾಗಿ ಊರಿಗೆ ಬಂದಿದ್ದ ಗುರು ವಾರದ ಹಿಂದೆಯಷ್ಟೇ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು ಎನ್ನಲಾಗಿದೆ.
 

Trending News