ಕುಮಾರ ಪರ್ವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ದೇವೇಗೌಡ

ಜೆಡಿಎಸ್ ಪಕ್ಷಕ್ಕೆ ಮೋಸ ಮಾಡಲು ಎಂಟು ಮಂದಿಯನ್ನು ಜೊತೆಯಲ್ಲಿಟ್ಟುಕೊಂಡು ಸಿದ್ದರಾಮಯ್ಯ ಕುಮಾರಸ್ವಾಮಿಗೆ ನೋವು ಕೊಟ್ಟಿದ್ದಾರೆ.

Last Updated : Mar 30, 2018, 06:08 PM IST
ಕುಮಾರ ಪರ್ವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ದೇವೇಗೌಡ title=

ಮಂಡ್ಯ: ಜೆಡಿಎಸ್ ಪಕ್ಷಕ್ಕೆ ಮೋಸ ಮಾಡಲು ಎಂಟು ಮಂದಿಯನ್ನು ಜೊತೆಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಗೆ ನೋವು ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

ಜೆಡಿಎಸ್ ಅಪ್ಪ- ಮಕ್ಕಳ ಪಕ್ಷವಲ್ಲ
ಮಂಡ್ಯದ ನಾಗಮಂಗಲ ಕ್ಷೇತ್ರದಲ್ಲಿ ಕುಮಾರ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಜೆಡಿಎಸ್ ಅಪ್ಪ- ಮಕ್ಕಳ ಪಕ್ಷವಲ್ಲ, ಜೆಡಿಎಸ್ ಪಕ್ಷಕ್ಕೆ ಮೋಸ ಮಾಡಲು ಎಂಟು ಮಂದಿಯನ್ನು ಜೊತೆಯಲ್ಲಿಟ್ಟುಕೊಂಡು ಸಿದ್ದರಾಮಯ್ಯ ಕುಮಾರಸ್ವಾಮಿಗೆ ನೋವು ಕೊಟ್ಟಿದ್ದಾರೆ. ಇಷ್ಟು ವಯಸ್ಸಾದರೂ ನಾನು ಜನರ ಮದ್ಯ ಬರಲು ಜನರೇ ಕಾರಣ ಎಂದು ತಿಳಿಸಿದರು.

ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಲು ಹೆಚ್ಡಿಕೆ ಕಾರಣ
ಸಿದ್ದರಾಮಯ್ಯ ಹಾಸನಕ್ಕೆ ಬಂದು ದೇವೇಗೌಡರ ರಾಜಕೀಯ ವಂಶವನ್ನು ಕಿತ್ತೊಗೆಯಬೇಕೆಂದು ಹೇಳ್ತಾರೆ. ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಲು ಕುಮಾರಸ್ವಾಮಿ ಬೇಕಿತ್ತು. ಸೋನಿಯಾ ಗಾಂಧಿ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಮಾಡಲು ಸಮ್ಮತಿ ಸೂಚಿಸರಲಿಲ್ಲ, ಆಗ ಸೋನಿಯಾರನ್ನು ಒಪ್ಪಿಸಿದ್ದು ಇದೇ ಕುಮಾರಸ್ವಾಮಿ ಎಂದು ಹೆಚ್ಡಿಡಿ ಹೇಳಿದರು.

ಮುಂದುವರೆದು ಮಾತನಾಡಿದ ದೇವೇಗೌಡರು, ಎಚ್.ವಿಶ್ವನಾಥ್ ಗೆ ತಾಯಿಯಂತಹ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಗೆ ಹೋಗಿದ್ದೀಯಾ ಸಿದ್ದರಾಮಯ್ಯ ಹೇಳ್ತಾರೆ, ಆದರೆ ನೀನು ನಿನ್ನ ತಾಯಿ ಜೆಡಿಎಸ್ ಬಿಟ್ಟು, ಸೋನಿಯಾ ಗಾಂಧಿಯನ್ನ ತಾಯಿ ಅಂತೀಯಾ ನಿನಗ್ಯಾವ ನೈತಿಕತೆ ಇದೆ ಎಂದು ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದರು.

Trending News