ತೆಲಂಗಾಣದಲ್ಲಿ ಗೆದ್ದಿದ್ದಕ್ಕೆ ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.!

ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣ ಚುನಾವಣೆಯಲ್ಲಿ ಕೆಲಸ ಮಾಡಿದ್ದರಲ್ಲಿ ತಪ್ಪೇನಿದೆ. ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನೂ ನಾವು ನಿಭಾಯಿದ್ದೇವೆ ಎಂದು ಸಚಿವ ದಿನೇಶ್‌ ಗುಂಟೂರಾವ್‌ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

Written by - Prashobh Devanahalli | Edited by - Krishna N K | Last Updated : Dec 7, 2023, 07:43 PM IST
  • ತೆಲಂಗಾಣ ಚುನಾವಣೆಯಲ್ಲಿ ಕೆಲಸ ಮಾಡಿದ್ದರಲ್ಲಿ ತಪ್ಪೇನಿದೆ.
  • ಪಕ್ಷ ವಹಿಸಿದ ಜವಾಬ್ದಾರಿಯನ್ನೂ ನಾವು ನಿಭಾಯಿದ್ದೇವೆ.
  • ಬಿಜೆಪಿಗರ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ.
ತೆಲಂಗಾಣದಲ್ಲಿ ಗೆದ್ದಿದ್ದಕ್ಕೆ ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.! title=

ಬೆಳಗಾವಿ : ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನ ನಾವು ಒಗ್ಗಟ್ಟಾಗಿ ನಿರ್ವಹಿಸಿದ್ದೇವೆ. ದಕ್ಷಿಣ ಭಾರತದ ಎರಡನೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ರಾಜ್ಯ ಬಿಜೆಪಿ ನಾಯಕರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣ ಚುನಾವಣೆಯಲ್ಲಿ ಕೆಲಸ ಮಾಡಿದ್ದರಲ್ಲಿ ತಪ್ಪೇನಿದೆ ಎಂದರು. ರಾಜ್ಯದಲ್ಲಿ ಸಚಿವರಾಗಿ ನಮ್ಮ ಕರ್ತವ್ಯವವನ್ನು ನಾವು ಅರಿತಿದ್ದೇವೆ. ಜೊತೆಗೆ ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನೂ ನಾವು ನಿಭಾಯಿದ್ದೇವೆ. ರಾಜ್ಯದ ಕಾಂಗ್ರೆಸ್ ನಾಯಕರಿಗೆ ತೆಲಂಗಾಣದಲ್ಲೇನು ಕೆಲಸ ಎಂಬ ಬಿಜೆಪಿ ಟೀಕೆ ಅರ್ಥಹೀನ ಎಂದರು. 

ಇದನ್ನೂ ಓದಿ:ಬರ ನೆರವು: 'ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ?'-ಸಿಎಂ ಸಿದ್ದರಾಮಯ್ಯ

ರಾಜ್ಯದ ನಾಯಕರಿಗೆ ತೆಲಂಗಾಣದ ಚುನಾವಣೆಯ ಮೇಲುಸ್ತುವಾರಿ ನೋಡಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ವತಿಯಿಂದ ನನ್ನನ್ನೂ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಜವಾಬ್ದಾರಿ ವಹಿಸಿತ್ತು. ವಿಶೇಷವಾಗಿ ನನಗೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಕ್ಷೇತ್ರಗಳ ಜವಾಬ್ದಾರಿ ನೀಡಲಾಗಿತ್ತು. ವಾರಂಗಲ್ ನ 11 ಕ್ಷೇತ್ರಗಳಲ್ಲಿ ನಾವು 10 ಕ್ಷೇತ್ರಗಳನ್ನ ಗೆದ್ದಿದ್ದೇವೆ. 

ಆ ಭಾಗದಲ್ಲಿ ಕಾಂಗ್ರೆಸ್ ಗೆ ಘಟಾನುಘಟಿ ನಾಯಕರೇ ಎದುರಾಳಿಯಾಗಿದ್ದರು. ಅವರನ್ನ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುವಲ್ಲಿ ನಮ್ಮ ಕೆಲವು ರಾಜಕೀಯ ತಂತ್ರಗಾರಿಕೆಗಳು ಹಾಗೂ ನಮ್ಮ ಪಕ್ಷದ ಕಾರ್ಯಕ್ರಮಗಳು ಕೈ ಹಿಡಿದವು. ಅಲ್ಲದೇ ಜನರು ಕೂಡ ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ಘಟಾನುಘಟಿ ನಾಯಕರನ್ನ ಸೋಲಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಇದನ್ನೂ ಓದಿ:ಅರ್ಜುನ ಆನೆಯ ʼಕೊಲೆಗಾರʼ ಯಾರು..? : ಸತ್ಯಾಂಶ ಬಿಚ್ಚಿಟ್ಟ ʼಆಡಿಯೋ ವೈರಲ್‌ʼ

ತೆಲಂಗಾಣ ಸಿಎಂ ಆಗಿ ಇಂದು ಅಧಿಕಾರ ಸ್ವೀಕರಿಸಿದ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದ ದಿನೇಶ್ ಗುಂಡೂರಾವ್, ಫಲಿತಾಂಶ ಪ್ರಕಟವಾದ ಎರಡೇ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಅಭ್ಯರ್ಥಿಯನ್ನ ಆಯ್ಕೆ ಮಾಡಿ ಸುಲಲಿತವಾಗಿ ಸರ್ಕಾರ ರಚಿಸುಲು ಅನುವು ಮಾಡಿಕೊಟ್ಟಿತು. ಆದರೆ ಉತ್ತರ ಭಾರತದ ಮೂರು ರಾಜ್ಯಗಳಲ್ಲಿ‌ ಗೆದ್ದಿರುವ ಬಿಜೆಪಿಗೆ ಇನ್ನೂ ಒಬ್ಬ ಸಿಎಂ ಅಭ್ಯರ್ಥಿಯನ್ನೂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ.‌ 

ದಕ್ಷಿಣ ಭಾರತದ ಎರಡನೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಅಂತಾ ಬಿಜೆಪಿ ಅಸೂಯೆ ಪಟ್ಟುಕೊಳ್ಳುವ ಬದಲು ತಾವು ಗೆದ್ದ ರಾಜ್ಯಗಳಲ್ಲಿ ಸರ್ಕಾರ ರಚಿಸುವತ್ತ ಗಮನ ಕೊಡಲಿ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಗೆ ತಿರುಗೇಟು ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News