BJP ನಾಯಕರೇ ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ: ದಿನೇಶ್ ಗುಂಡೂರಾವ್

PM Modi Bengaluru Road Show: ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಪ್ರಧಾನಿ‌ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

Written by - Puttaraj K Alur | Last Updated : Aug 26, 2023, 03:37 PM IST
  • ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ BJP ನಾಯಕರಿಗೂ ಅವಕಾಶ ಕೊಟ್ಟಿಲ್ಲ
  • ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮತ್ತು ಮಾಜಿ ಸಿಎಂ ಬೊಮ್ಮಾಯಿಯವರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳಲಿಲ್ಲ
  • ರಾಜ್ಯ BJP ನಾಯಕರನ್ನು ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ
BJP ನಾಯಕರೇ ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ: ದಿನೇಶ್ ಗುಂಡೂರಾವ್   title=
ಬಿಜೆಪಿ ನಾಯಕರ ಬಗ್ಗೆ ಗುಂಡೂರಾವ್ ವ್ಯಂಗ್ಯ!

ಬೆಂಗಳೂರು: ಚಂದ್ರಯಾನ-3ರ ಯಶಸ್ಸಿನ ಬಳಿಕ ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಫಿದಾ ಆಗಿದ್ದಾರೆ. ಶನಿವಾರ ಬೆಂಗಳೂರನ ಇಸ್ರೋ ಕಚೇರಿಗೆ ಭೇಟಿ ನೀಡಿದ ಅವರು ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ನೀಡದಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನ ರೋಡ್ ಶೋ ವೇಳೆ ರಸ್ತೆಬದಿ ನಿಂತು ಪ್ರಧಾನಿ ಮೋದಿಯತ್ತ ಕೈಬಿಸುತ್ತಿರುವ ಬಿಜೆಪಿ ನಾಯಕರ ಚಿತ್ರವನ್ನು ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ISRO ವಿಜ್ಞಾನಿಗಳನ್ನು ಅಭಿನಂದಿಸಲು ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ರಾಜ್ಯ BJP ನಾಯಕರಿಗೂ ಅವಕಾಶ ಕೊಟ್ಟಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಕೂಡ ಹತ್ತಿರಕ್ಕೆ ಬಿಟ್ಟುಕೊಳ್ಳಲಿಲ್ಲ. ರಾಜ್ಯ BJP ನಾಯಕರಿಗೆ ಇದಕ್ಕಿಂತ ಅಪಮಾನವುಂಟೆ? BJP ನಾಯಕರಿಗೆ ಕಿಂಚಿತ್ತಾದರೂ ಆತ್ಮಗೌರವ ಬೇಡವೆ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನ.17ರೊಳಗೆ HSRP ನಂಬರ್ ಪ್ಲೇಟ್ ಕಡ್ಡಾಯ!

‘ರಾಜ್ಯ BJP ನಾಯಕರನ್ನು ಅವರ ಪಕ್ಷದ ವರಿಷ್ಟರು ಕಾಲಕಸಕ್ಕಿಂತ ಕಡೆಯಾಗಿ ನೋಡುತ್ತಾರೆ ಎಂಬುದಕ್ಕೆ ಪ್ರಧಾನಿ‌ ಮೋದಿಯವರ ಇಂದಿನ ವರ್ತನೆಯೇ ಸಾಕ್ಷಿ. ಬಿಜೆಪಿ ನಾಯಕರು ಇಂದು ಮೋದಿಯವರ ಮುಂದೆ ಹಲ್ಲುಗಿಂಜಿ ಜೀ ಹುಜೂರು ಎಂದು ಮಂಡಿಯೂರಿ ನಿಂತರೂ, ಮೋದಿಯವರು ಕಣ್ಣೆತ್ತಿಯೂ ನೋಡಿಲ್ಲ’ವೆಂದು ಕುಟುಕಿದ್ದಾರೆ.

‘ಪ್ರಧಾನಿ ಮೋದಿಯವರ ಸರ್ವಾಧಿಕಾರಿ ‌ಮನಃಸ್ಥಿತಿಯ ಬಗ್ಗೆ ಸತ್ಯ ಹೇಳಿದಾಗಲೆಲ್ಲಾ ಬಿಜೆಪಿಯವರು ಎಗರೆಗರಿ ಬೀಳುತ್ತಿದ್ದರು. ಬಹುಶಃ ರಾಜ್ಯ BJP ನಾಯಕರಿಗೆ ಇಂದು ಮೋದಿಯವರ ಸರ್ವಾಧಿಕಾರಿ ಮನೋಭಾವದ ಸತ್ಯದರ್ಶನವಾಗಿರಬಹುದು‌. BJP ನಾಯಕರೆ, ಇನ್ನೆಷ್ಟು ದಿನ ಆತ್ಮಗೌರವ, ಸ್ವಾಭಿಮಾನ ಕಳೆದುಕೊಂಡು ಇರುತ್ತೀರಿ? ಆತ್ಮವಿಮರ್ಶೆ ಮಾಡಿಕೊಳ್ಳಿ’ ಎಂದು ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News