ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ: ಬಿಜೆಪಿಗೆ ಕಾಂಗ್ರೆಸ್ ಸವಾಲು

#BJPvsBJP ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಕಾಂಗ್ರೆಸ್,  ಬಿಜೆಪಿ ನಾಯಕರ ಆಂತರಿಕ ಕಿತ್ತಾಟದ ಬಗ್ಗೆ ವ್ಯಂಗ್ಯವಾಡಿದೆ.

Written by - Zee Kannada News Desk | Last Updated : Aug 17, 2022, 12:47 PM IST
  • ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?!
  • ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ
  • ಬಿಜೆಪಿ ನಾಯಕರ ಆತಂರಿಕ ಕಿತ್ತಾಟದ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್
ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ: ಬಿಜೆಪಿಗೆ ಕಾಂಗ್ರೆಸ್ ಸವಾಲು title=
ಬಿಜೆಪಿಗೆ ಕಾಂಗ್ರೆಸ್ ಸವಾಲು!

ಬೆಂಗಳೂರು: ಇಂತಹ ತಳ್ಳಾಟ-ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಕಾಂಗ್ರೆಸ್ ಸವಾಲು ಹಾಕಿದೆ. #BJPvsBJP ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ‘ಕೈ’ ಪಕ್ಷ ಬಿಜೆಪಿ ನಾಯಕರ ಆಂತರಿಕ ಕಿತ್ತಾಟದ ಬಗ್ಗೆ ವ್ಯಂಗ್ಯವಾಡಿದೆ.

ಇದನ್ನೂ ಓದಿ: ಬೂಟು ಹಾಕಿಕೊಳ್ಳಲು ಗಾಂಧೀಜಿ ಫೋಟೋ ಆಸರೆಯೇ?: ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಆಕ್ರೋಶ

‘ಬಿಜೆಪಿಯಲ್ಲಿ ಸೊಗಡು ಶಿವಣ್ಣ vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ vs ಕೆ.ಸುಧಾಕರ್, ಸೋಮಶೇಖರ್ vs ಮಾಧುಸ್ವಾಮಿ, ಮುನಿರತ್ನ vs ಮಾಧುಸ್ವಾಮಿ, ಆರ್.ಅಶೋಕ್ vs ಅಶ್ವತ್ಥ್ ನಾರಾಯಣ್, ಭಗವಂತ್ ಖೂಬಾ vs ಶರಣು ಸಲಗರ, ಕಾರ್ಯಕರ್ತರು vs ಬಿಜೆಪಿ, ಆರಗ ಜ್ಞಾನೇಂದ್ರ vs ಬಸವನಗೌಡ ಪಾಟೀಲ್ ಯತ್ನಾಳ್ ಮ್ತು BSY vs ಬಿ.ಎಲ್.ಸಂತೋಷ್ ಈ ರೀತಿ ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?!’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಜೆಪಿ ರಾಷ್ಟ್ರಕ್ಕೆ ತಗುಲಿದ ವ್ಯಾದಿಗಳೇ ಹೊರತು ರಾಷ್ಟ್ರವಾದಿಗಳಲ್ಲ: ಕಾಂಗ್ರೆಸ್

‘ಸುರೇಶ್ ಗೌಡ ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ, ಸ್ಟ್ರಾಂಗ್ ಗೃಹ ಸಚಿವರು ಬೇಕು ಅಂತಾ ಯತ್ನಾಳ್ ಹೇಳುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ, ಸಿಎಂ ಹೇಳಿದ್ರೆ ರಾಜೀನಾಮೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ. ಹೀಗಾಗಿ ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ’ ಎಂದು ಬಿಜೆಪಿಗೆ ಕಾಂಗ್ರೆಸ್ ಸವಾಲು ಒಡ್ಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News