ಸಂಕಷ್ಟ ಹಂಚಿಕೆ ಸೂತ್ರ ಅನಿವಾರ್ಯ: ಸಚಿವ ಎನ್. ಚಲುವರಾಯಸ್ವಾಮಿ

ಸಂಕಷ್ಟ ಪರಿಸ್ಥಿತಿಯಲ್ಲಿ  ನೀರಿನ‌ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

Written by - Prashobh Devanahalli | Edited by - Manjunath N | Last Updated : Sep 22, 2023, 04:56 PM IST
  • ಕೃಷಿ ವಿದ್ಯಾರ್ಥಿಗಳು ನೂರಾರು ಜನರಿಗೆ ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಹಾಗೂ ಇತರ ಕೃಷಿಕರಿಗೂ ಶಕ್ತಿ ತುಂಬುವಂತಾಗಬೇಕು ಎಂದು‌ ಸಚಿವರು ಕರೆ ನೀಡಿದರು.
  • ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಪ್ರತಿ ವರ್ಷ ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿರುವುದು ಅಭಿನಂದನಾರ್ಹ ಎಂದರು.
  • ಇದೇ ವೇಳೆ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಹಾಗೂ ನಾಮ ನಿರ್ದೇಶಿತ ಸದಸ್ಯರನ್ನು ಅಭಿನಂದಿಸಲಾಯಿತು.
ಸಂಕಷ್ಟ ಹಂಚಿಕೆ ಸೂತ್ರ ಅನಿವಾರ್ಯ: ಸಚಿವ ಎನ್. ಚಲುವರಾಯಸ್ವಾಮಿ title=
file photo

ಬೆಂಗಳೂರು: ಸಂಕಷ್ಟ ಪರಿಸ್ಥಿತಿಯಲ್ಲಿ  ನೀರಿನ‌ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಹೆಬ್ಬಾಳದಲ್ಲಿ ಆಯೋಜಿಸಿದ್ದ ಪ್ರತಿಭಾನ್ವಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ಆದಿತ್ಯ ಎಲ್-1 ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು!

ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ರಚಿಸಿದ‌ ನಂತರ ಕೇಂದ್ರ ಅಥವಾ ಸಿ.ಡಬ್ಲ್ಯೂ ಎಂ ಎ.ಬರ ಪರಿಸ್ಥಿತಿಯಲ್ಲಿ,ಜಲಾಶಯಗಳಲ್ಲಿ ನೀರಿನ‌ ಲಭ್ಯತೆ ಕೊರತೆ ಇರುವ ಸಂದರ್ಭದಲ್ಲಿ ಯಾವ ಮಾನ ದಂಡಗಳನ್ನು ಅನುಸರಿಸಬೇಕು‌ ಎಂಬ ಸೂತ್ರವೇ ಸಿದ್ದಪಡಿಸಿಲ್ಲ ಹಾಗಾಗಿ‌ ಕರ್ನಾಟಕ್ಕೆ  ನಿರಂತರ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಬರ ಆವರಿಸಿದೆ,195 ಜಿಲೆಗಳಲ್ಲಿ ಬರ ಘೋಷಣೆ ಮಾಡಲಾಗಿದ್ದು ಪರಿಹಾಕ್ಕಾಗಿ  ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತಿದೆ.ರಾಜ್ಯ ಸರ್ಕಾರ ರೈತರ ಹಿತ ಕಾಯಲು  ‌ಸದಾ  ಬದ್ದವಾಗಿದೆ ಎಂದರು.

ಇದನ್ನೂ ಓದಿ: ಐತಿಹಾಸಿಕ ಮಾದಗಮಾಸೂರು ಕೆರೆಗೆ ಬಾಗಿನ ಅರ್ಪಿಸಿದ ಶಾಸಕ!

ಕೃಷಿ ವಿದ್ಯಾರ್ಥಿಗಳು ನೂರಾರು ಜನರಿಗೆ ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಹಾಗೂ ಇತರ ಕೃಷಿಕರಿಗೂ  ಶಕ್ತಿ ತುಂಬುವಂತಾಗಬೇಕು ಎಂದು‌ ಸಚಿವರು ಕರೆ ನೀಡಿದರು.ಕೃಷಿ ವಿಶ್ವ ವಿದ್ಯಾನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಪ್ರತಿ ವರ್ಷ ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿರುವುದು ಅಭಿನಂದನಾರ್ಹ ಎಂದರು.ಇದೇ ವೇಳೆ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಹಾಗೂ ನಾಮ ನಿರ್ದೇಶಿತ ಸದಸ್ಯರನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳು ಮಾತನಾಡಿ, ಬರಗಾಲದಂತ ಸಂಧರ್ಭದಲ್ಲಿ ಕೃಷಿಗೆ ಪೂರಕವಾಗಿ, ಕೃಷಿಕರ ಹಿತಕ್ಕಾಗಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿ,ಅನುಷ್ಠಾನಗೊಳಿಸುವ ಮೂಲಕ ರೈತರ ಸಂಕಷ್ಟಕ್ಕೆ ಕೃಷಿ ವಿವಿಗಳು ಸ್ಪಂದಿಸುತ್ತಿವೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News