ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ, ರಾಜ್ಯದ ಹಿತ ಕಾಯಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

DK Shivakumar : ಬಿಳಿಗುಂಡ್ಲುವಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ವಿಚಾರದಲ್ಲಿ ನಾವು ತೀವ್ರವಾಗಿ ಹೋರಾಟ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. 

Written by - Prashobh Devanahalli | Last Updated : Aug 29, 2023, 10:02 PM IST
  • ಬಿಳಿಗುಂಡ್ಲುವಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯಬೇಕು
  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ
  • ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ
ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ, ರಾಜ್ಯದ ಹಿತ ಕಾಯಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್   title=

ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜಕಾರಣ ಬೇಡ. ಶುಕ್ರವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದ್ದು, ರಾಜ್ಯದ ರೈತರು ಹಾಗೂ ಜನರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಹಾಗೂ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಿಳಿಗುಂಡ್ಲುವಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ವಿಚಾರದಲ್ಲಿ ನಾವು ತೀವ್ರವಾಗಿ ಹೋರಾಟ ಮಾಡಿದ್ದೇವೆ. ನಮ್ಮ ತಾಂತ್ರಿಕ ಸಿಬ್ಬಂದಿ ಹಾಗೂ ಸಮಿತಿಯಲ್ಲಿ ಇರುವ ಅಧಿಕಾರಿಗಳು ಕಾವೇರಿ ನೀರಿನ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ. ಈ ವಿಚಾರವಾಗಿ ಕೂಡಲೇ ನಾನು ಹಾಗೂ ಮುಖ್ಯಮಂತ್ರಿಗಳು ಕಾನೂನು ತಜ್ಞರ ಬಳಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು. 

ಇದನ್ನೂ ಓದಿ: ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮೀಗೆ ಸೋನಿಯಾ ಚಾಲನೆ.. ಯಾವಾಗ ಎರಡು ಸಾವಿರ ಹಣ ಸಿಗುತ್ತೆ ಗೊತ್ತಾ..? 

ಸೆ.1 ಶುಕ್ರವಾರದಂದು ಸುಪ್ರೀಂ ಕೋರ್ಟ್  ಕಾವೇರಿ ನೀರಿನ ವಿಚಾರವಾಗಿ ಮತ್ತೊಮ್ಮೆ ತೀರ್ಪು ನೀಡಲಿದೆ. ಅಧಿಕಾರಿಗಳು ಕರ್ನಾಟಕದ ಹಿತಕ್ಕೆ ಧಕ್ಕೆಯಾಗದಂತೆ ರಾಜ್ಯದ ಹಿತ ಕಾಪಾಡುತ್ತೇವೆ ಎಂದು ಮಾತು ಕೊಟ್ಟಿದ್ದಾರೆ. ನಾವು ಸಹ ಅಡ್ವೋಕೇಟ್ ಜನರಲ್ ಹಾಗೂ ಕಾನೂನು ತಜ್ಞರ ಬಳಿ ಮಾತನಾಡುತ್ತೇವೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದರು. 

ಆ.31ರ ವರೆಗೆ ನಿತ್ಯ 10 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಹೇಳಿದ್ದಾರೆ. ಕೆಆರ್‌ಎಸ್ ಗರಿಷ್ಠ ಮಟ್ಟ 24 ಟಿಎಂಸಿ ಅದರಲ್ಲಿ 15 ಟಿಎಂಸಿ ಲಭ್ಯವಿದೆ. ಕಬಿನಿ ಗರಿಷ್ಠ ಮಟ್ಟ 13 ಟಿಎಂಸಿಯಲ್ಲಿ 3 ಟಿಎಂಸಿ ಇದೆ. ಹಾರಂಗಿಯಲ್ಲಿ 7.8 ಟಿಎಂಸಿಯಲ್ಲಿ 7 ಟಿಎಂಸಿ ಲಭ್ಯವಿದೆ ಮತ್ತು  ಹೇಮಾವತಿಯ ಗರಿಷ್ಠ 25 ಟಿಎಂಸಿಯಲ್ಲಿ 21 ಟಿಎಂಸಿ ಲಭ್ಯವಿದೆ ಎಂದು ಹೇಳಿದರು. 

ತಮಿಳುನಾಡಿನವರು ಆಕ್ರಮಣಕಾರಿಯಾಗಿ ತಮ್ಮ ವಾದ ಮಂಡಿಸಿದ್ದಾರೆ, ನಮ್ಮ ಅಧಿಕಾರಿಗಳು ಸಹ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಏಕೆಂದರೆ ಅವರು ಕೇಳಿದ್ದು 24 ಸಾವಿರ ಕ್ಯೂಸೆಕ್ಸ್, ಆಗಸ್ಟ್ ತಿಂಗಳ 28ರ ತನಕ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ್ದು, ನಮಗೆ ಮಳೆ ಬಂದಿಲ್ಲ ಎಂದು ಮನವರಿಕೆ ಮಾಡಿದ ಪರಿಣಾಮ ನೀರು ಹರಿಸುವ ಪ್ರಮಾಣ 5 ಸಾವಿರ ಕ್ಯೂಸೆಕ್ಸ್‌ಗೆ ಇಳಿದಿದೆ ಎಂದು ಹೇಳಿದರು. 

ಇದನ್ನೂ ಓದಿ: ನನಗೂ ಏಪ್ರಾನ್, ಸ್ಟೆಥಸ್ಕೋಪ್ ಹಾಕಿಕೊಂಡು ಓಡಾಡೋ ಆಸೆ ಇತ್ತು, ಮೆಡಿಕಲ್ ಸೀಟೇ ಸಿಗಲಿಲ್ಲ: ಸಿಎಂ ಸಿದ್ದರಾಮಯ್ಯ

ಆ.29 ರಿಂದಲೇ ನೀರು ಬಿಡಬೇಕೆ? ನೀವು ನೀರು ಬಿಡಲು ಆದೇಶ ನೀಡಿದ್ದೀರೆ ಎಂದು ಮಾಧ್ಯಮಗಳು ಕೇಳಿದಾಗ, ಈಗ ತಾನೇ ತೀರ್ಪು ಬಂದಿದೆ, ಅದನ್ನು ನಾನು ಪರಿಶೀಲಿಸಬೇಡವೇ. ಈಗ ಕೆಆರ್‌ಎಸ್ ಬೀಗ ಯಾರ ಬಳಿ ಇದೆ? ಕೇಂದ್ರ ಸರ್ಕಾರದ ಬಳಿ ತಾನೇ? ನಮ್ಮ ಬಳಿ ಇದೆಯೇ? ಶುಕ್ರವಾರ ಸುಪ್ರೀಂ ಕೋರ್ಟಿನಲ್ಲಿ ಬೈಸಿಕೊಳ್ಳಲು ಇಷ್ಟವಿಲ್ಲ, ನಿಮಗೆ ಇಷ್ಟವಿದೆಯೇ?" ಎಂದು ತೀಕ್ಷ್ಣವಾಗಿ ಉತ್ತರಿಸಿದರು ಎಂದು ಹೇಳಿದರು. 

ಇಂಡಿಯಾ ಮೆಚ್ಚಿಸಲು ಕಾಂಗ್ರೆಸ್ ಸರ್ಕಾರ ರಾಜಿಯಾಗಿದೆ ಎಂದು ಸಿ.ಟಿ.ರವಿ ಆರೋಪ‌ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ, ನಾನು ನೀರಿನ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದೇನೆ. ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ಎಷ್ಟು ನೀರು ಬಿಟ್ಟಿದ್ದಾರೆ ಎನ್ನುವ ದಾಖಲೆ ನನ್ನ ಬಳಿ ಇದೆ. ಅದನ್ನು ಹೊರಗಡೆ ಬಿಡಲೇ? ಸುಮ್ಮನೇ ರಾಜಕಾರಣ ಮಾಡುತ್ತಿದ್ದಾರೆ, ಅವರಿಗೆ ವಾಸ್ತವಾಂಶ ಅರಿವಿಲ್ಲವೇ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News