ಆಗಸ್ಟ್ 01 ರಿಂದ ಆಗಸ್ಟ್ 09 ರವರೆಗೆ ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ ಗೊತ್ತೇ?

ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಅತಿಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ, ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Written by - Manjunath N | Last Updated : Aug 1, 2024, 03:54 PM IST
  • ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ,
  • ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
  • ಮೇಲ್ಕಂಡ ಮಳೆ ಮುನ್ಸೂಚನೆ ಅನ್ವಯ, ರಾಜ್ಯದ ಕರಾವಳಿ & ಮಲೆನಾಡು ಪ್ರದೇಶಗಳ ಕೆಲವೆಡೆ ರಸ್ತೆ ಅಡಚಣೆಗಳು, ಹಠಾತ್ ಪ್ರವಾಹ & ಭೂಕುಸಿತವುಂಟಾಗುವ ಸಾಧ್ಯತೆಗಳಿದೆ.
ಆಗಸ್ಟ್ 01 ರಿಂದ ಆಗಸ್ಟ್ 09 ರವರೆಗೆ ಎಲ್ಲೆಲ್ಲಿ ಭಾರಿ ಮಳೆಯಾಗಲಿದೆ ಗೊತ್ತೇ? title=

ಬೆಂಗಳೂರು: ದಕ್ಷಿಣ ಗುಜರಾತ್ ಮತ್ತು ಕೇರಳ ರಾಜ್ಯಗಳ ಕರಾವಳಿ ಸಮುದ್ರಗಳಲ್ಲಿ ಸರಾಸರಿ ಸಮುದ್ರಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲಿ ಅತಿಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ, ಇನ್ನುಳಿದ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಸೈಬರ್ ದಾಳಿಯಿಂದ ಬ್ಯಾಂಕ್‌ಗಳ UPI-IMPS ಸ್ಥಗಿತ!300 ಬ್ಯಾಂಕ್ ಗಳ ಪಟ್ಟಿಯಲ್ಲಿದೆಯೇ ನಿಮ್ಮ ಬ್ಯಾಂಕ್ ? ಇಲ್ಲಿ ಚೆಕ್ ಮಾಡಿ

ಉತ್ತರ ಒಳನಾಡು ಜಿಲ್ಲೆಗಳಿಗೆ, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಮೇಲ್ಕಂಡ ಮಳೆ ಮುನ್ಸೂಚನೆ ಅನ್ವಯ, ರಾಜ್ಯದ ಕರಾವಳಿ & ಮಲೆನಾಡು ಪ್ರದೇಶಗಳ ಕೆಲವೆಡೆ ರಸ್ತೆ ಅಡಚಣೆಗಳು, ಹಠಾತ್ ಪ್ರವಾಹ & ಭೂಕುಸಿತವುಂಟಾಗುವ ಸಾಧ್ಯತೆಗಳಿದೆ. ಹೆಚ್ಚಿನ ಮಳೆಯಿಂದಾಗಿ ನದಿಪಾತ್ರಗಳಿಗೆ ಹೆಚ್ಚಿನ ಒಳಹರಿವು ಕಂಡುಬರಲಿದೆ. ಅದ್ದರಿಂದ ರಾಜ್ಯದ ಕರಾವಳಿ & ಮಲೆನಾಡು ಹಾಗೂ ನದಿತೀರ ಪ್ರದೇಶದ ಜನವಸತಿಗಳು ಜಾಗ್ರತೆ ವಹಿಸಲು ಸೂಚಿಸಿದೆ.

ಇದನ್ನೂ ಓದಿ: Top 5 Bikes In India: ಇವೇ ನೋಡಿ 2024ರ ಟಾಪ್ ಬೈಕುಗಳು

ಆಗಸ್ಟ್ 01 ರಿಂದ ಆಗಸ್ಟ್ 09 ರವರೆಗೆ ಮಳೆ ಮುನ್ಸೂಚನೆ:

ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 03 ರವರೆಗೆ ಚದುರಿದಿಂದ  ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಚದುರಿದಿಂದ  ವ್ಯಾಪಕವಾಗಿ ಸಾಧಾರಣ ಮಳೆ, ನಂತರ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ  ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆ ಮತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News