"ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ"

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ.ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Manjunath N | Last Updated : Apr 6, 2024, 09:52 PM IST
  • ಕೋಲಾರದಲ್ಲಿ ಇಂದು ಆಯೋಜಿಸಿದ್ದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತನೀಡಿ ಬೆಂಬಲಿಸುವಂತೆ ಮನವಿ ಮಾಡಿದೆ.
  • ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ತಳಮಟ್ಟದಿಂದ ಬೆಳೆದು ಈಗ ಈ ಹಂತಕ್ಕೆ ಬಂದಿದ್ದಾರೆ.
  • ಇವರು ಬಹುಮತದಿಂದ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ.
"ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ" title=

ಬೆಂಗಳೂರು: ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಘನತೆ ತಂದಿದ್ದೇವೆ.ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ GST ಮೋಸ: ಬಹಿರಂಗ ಚರ್ಚೆಗೆ ನಾನು ಸಿದ್ಧ, ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ?

ಕೋಲಾರದಲ್ಲಿ ಇಂದು ಆಯೋಜಿಸಿದ್ದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.

May be an image of 7 people and text

ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ತಳಮಟ್ಟದಿಂದ ಬೆಳೆದು ಈಗ ಈ ಹಂತಕ್ಕೆ ಬಂದಿದ್ದಾರೆ.ಇವರು ಬಹುಮತದಿಂದ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ.ನಿಮ್ಮೆಲ್ಲರ ಸಹಕಾರ ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದು ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.May be an image of one or more people, crowd and text

ಇದನ್ನೂ ಓದಿ:  H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!

ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು.ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು.ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು ಎಂದು ಹೇಳಿದ್ದಾರೆ.

ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?

ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು.ಗ್ಯಾರಂಟಿಗಳು ಜಾರಿಯಾದ ಬಳಿಕ ಗ್ಯಾರಂಟಿಗಳು ನಿಂತು ಹೋಗುತ್ತವೆ ಎನ್ನುವ ಹೊಸ ಸುಳ್ಳು ಸೃಷ್ಟಿಸಿದ್ದಾರೆ.ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷ ವಾರಂಟಿ ಇದೆ' ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News