ಸಿದ್ದರಾಮಯ್ಯರನ್ನು ಸೋಲಿಸಿದ್ದು ಡಾ.ಜಿ. ಪರಮೇಶ್ವರ್- ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ

ಸಿದ್ದರಾಮಯ್ಯಗೆ ಸೋತರೂ ಬುದ್ದಿ ಬಂದಿಲ್ಲ: ಸಿದ್ದು ಮೇಲೆ ಮತ್ತೆ ಈಶ್ವರಪ್ಪ ವಾಗ್ದಾಳಿ  

Last Updated : Aug 11, 2018, 12:26 PM IST
ಸಿದ್ದರಾಮಯ್ಯರನ್ನು ಸೋಲಿಸಿದ್ದು ಡಾ.ಜಿ. ಪರಮೇಶ್ವರ್- ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ  title=

ಮೈಸೂರು:  ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಈ ಹಿಂದೆ ಸಿದ್ದರಾಮಯ್ಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದು ಡಾ. ಜಿ. ಪರಮೇಶ್ವರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋತರೂ ಬುದ್ಧಿಬಂದಿಲ್ಲ. ಮುಖ್ಯಮಂತ್ರಿಯಾಗಿ ಸೋತ ಮೇಲೆ ಅವರು ಹುಚ್ಚರಾಗಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸೋತಿದ್ದಾರೆ. ಅಂತಹವರಿಗೆ ಚುನಾವಣೆ ಉಸ್ತುವಾರಿ ನೀಡಲು ಕಾಂಗ್ರೆಸ್ ಮುಂದಾಗಿದೆ. ದೇಶಕ್ಕೆ ಸ್ವಾತಂತ್ರ ಕೊಟ್ಟ ಕಾಂಗ್ರೆಸ್ ಸ್ಥಿತಿ ಏನಾಯ್ತು ಎಂದು ಇದೇ ಸಮಯದಲ್ಲಿ ಈಶ್ವರಪ್ಪ ಕಾಂಗ್ರೆಸ್ ಅನ್ನು ಲೇವಡಿ ಮಾಡಿದರು.

Trending News