ಬರ ನೆರವು: 'ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ?'-ಸಿಎಂ ಸಿದ್ದರಾಮಯ್ಯ

ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಅವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್‌ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Manjunath N | Last Updated : Dec 7, 2023, 07:06 PM IST
  • ನಮ್ಮ ಕೃಷಿ ಮತ್ತು ಕಂದಾಯ ಸಚಿವರಿಬ್ಬರೂ ದೆಹಲಿಗೆ ಭೇಟಿ ನೀಡಿ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ
  • ರಾಜ್ಯ ಸರ್ಕಾರದ ಇಷ್ಟೆಲ್ಲ ಪ್ರಯತ್ನದ ಹೊರತಾಗಿಯೂ ಕೇಂದ್ರ ಸರ್ಕಾರ ಇದಕ್ಕೆ ಸಂಬಂದಿಸಿದಂತೆ ಪ್ರಾಥಮಿಕ ಸಭೆಯನ್ನೂ ಕರೆದಿಲ್ಲ
  • ಭೇಟಿಗೆ ಅವಕಾಶ ನೀಡಬೇಕೆಂದು ಪ್ರಧಾನ ಮಂತ್ರಿಯವರಿಗೆ ಬರೆದ ಪತ್ರಕ್ಕೂ ಇಲ್ಲಿಯ ವರೆಗೆ ಪ್ರತಿಕ್ರಿಯೆ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಬರ ನೆರವು: 'ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ?'-ಸಿಎಂ ಸಿದ್ದರಾಮಯ್ಯ  title=

ಬೆಳಗಾವಿ: ಬರಗಾಲಕ್ಕೆ ತುತ್ತಾಗಿ ತೀವ್ರ ಸಂಕಷ್ಟದಲ್ಲಿರುವ ಕರ್ನಾಟಕದ ರೈತರಿಗೆ ಪರಿಹಾರ ನೀಡಬೇಕೆಂದು ತಿಂಗಳುಗಳಿಂದ ಮನವಿ ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಇಲ್ಲಿಯ ವರೆಗೆ ಪೈಸೆ ಹಣವನ್ನೂ ನೀಡದ ಪ್ರಧಾನಿ ನರೇಂದ್ರ ಮೋದಿ ಅವರು ಕೀನ್ಯಾ ದೇಶದ ಕೃಷಿ ಕ್ಷೇತ್ರದ ಆಧುನೀಕರಣಕ್ಕಾಗಿ 250 ಮಿಲಿಯನ್ ಡಾಲರ್‌ಗಳಷ್ಟು ನೆರವು ನೀಡಿರುವುದನ್ನು ನೋಡಿದಾಗ ಸಹಜವಾಗಿಯೇ ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ ಎಂಬ ಪ್ರಶ್ನೆ ಕೇಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸ್ವತಂತ್ರ ದೇಶವಾಗಿ ರೂಪು ಪಡೆದ ದಿನದಿಂದಲೂ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಿಗೆ ನೆರವು ನೀಡುವ ಪರಂಪರೆಯನ್ನು ಭಾರತ ಮುಂದುವರಿಸಿಕೊಂಡು ಬಂದಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬೇರೆ ದೇಶಗಳ ಕಷ್ಟಕ್ಕೆ ನೆರವಾಗುವುದರ ಬಗ್ಗೆ ನಮ್ಮ ವಿರೋಧ ಇಲ್ಲ. ಆದರೆ ಇದೇ ಔದಾರ್ಯ ಮತ್ತು ಕಾಳಜಿಯನ್ನು ನಮ್ಮದೇ ದೇಶದ ರಾಜ್ಯಗಳ ಬಗ್ಗೆ ಯಾಕೆ ಪ್ರಧಾನಿ ನರೇಂದ್ರ ಮೋದಿಯವರು ತೋರುತ್ತಿಲ್ಲ ಎನ್ನುವುದಷ್ಟೇ ನಮ್ಮ ಪ್ರಶ್ನೆ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅರ್ಜುನ ಆನೆಯ ʼಕೊಲೆಗಾರʼ ಯಾರು..? : ಸತ್ಯಾಂಶ ಬಿಚ್ಚಿಟ್ಟ ʼಆಡಿಯೋ ವೈರಲ್‌ʼ

ಕರ್ನಾಟಕ ರಾಜ್ಯ ಈ ಬಾರಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದು ರಾಜ್ಯ ಸರ್ಕಾರ ತನ್ನ ಶಕ್ತಿ ಮೀರಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದೆ.ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವೇ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಮಾಡಿಕೊಂಡು ಹೋಗಿ ವರದಿ ನೀಡಿದೆ. ರಾಜ್ಯ ಸರ್ಕಾರ ಕೂಡಾ ಸಮೀಕ್ಷೆ ನಡೆಸಿ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ನಮ್ಮ ಕೃಷಿ ಮತ್ತು ಕಂದಾಯ ಸಚಿವರಿಬ್ಬರೂ ದೆಹಲಿಗೆ ಭೇಟಿ ನೀಡಿ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಇಷ್ಟೆಲ್ಲ ಪ್ರಯತ್ನದ ಹೊರತಾಗಿಯೂ ಕೇಂದ್ರ ಸರ್ಕಾರ ಇದಕ್ಕೆ ಸಂಬಂದಿಸಿದಂತೆ ಪ್ರಾಥಮಿಕ ಸಭೆಯನ್ನೂ ಕರೆದಿಲ್ಲ. ಭೇಟಿಗೆ ಅವಕಾಶ ನೀಡಬೇಕೆಂದು ಪ್ರಧಾನ ಮಂತ್ರಿಯವರಿಗೆ ಬರೆದ ಪತ್ರಕ್ಕೂ ಇಲ್ಲಿಯ ವರೆಗೆ ಪ್ರತಿಕ್ರಿಯೆ ಇಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾಯಿಯಂತೆ ಮನೆಯಲ್ಲಿಯೇ ʼಚಿರತೆʼ ಸಾಕಿದ್ದ ಸ್ಟಾರ್‌ ನಟಿ..! ಫೋಟೋ ವೈರಲ್ 

ಬರಗಾಲದಿಂದಾಗಿ ರಾಜ್ಯದ 48.19 ಲಕ್ಷ ಎಕರೆ ಕೃಷಿ ಭೂಮಿಯಲ್ಲಿ ಆಗಿರುವ ಬೆಳೆನಷ್ಟಕ್ಕಾಗಿ ಕನಿಷ್ಠ ರೂ.4,663 ಕೋಟಿ ರೂಪಾಯಿ ಪರಿಹಾರ ನೀಡುವ ಜೊತೆಯಲ್ಲಿ ಒಟ್ಟು ಬರ ಪರಿಹಾರಕ್ಕಾಗಿ ರೂ.18,171 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ಆದರೆ ಇಲ್ಲಿಯ ವರೆಗೆ ನಯಾಪೈಸೆ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News