Karnataka Budget 2021: 'ಎಣ್ಣೆ ಪ್ರಿಯ'ರಿಗೆ ಸಿಹಿ ಸುದ್ದಿ: ಅಬಕಾರಿ ಸುಂಕ ಹೆಚ್ಚಳವಿಲ್ಲ!

ಕೊರೋನಾ ಸಂಕಷ್ಟದಿಂದಾಗಿ ಈ ಬಾರಿ ಯಾವುದೇ ತೆರಿಗೆ ಏರಿಕೆಯಿಲ್ಲ ಎಂಬುದಾಗಿ ಘೋಷಿಸಿದ್ದಾರೆ.

Last Updated : Mar 8, 2021, 02:49 PM IST
  • ಆರ್ಥಿಕ ಸಂಕಷ್ಟದ ಸಲುವಾಗಿ ತೆರಿಗೆ ಸಂಗ್ರಹಣೆ ಮೂಲಕ ಬೊಕ್ಕಸ ತುಂಬಿಸಿಕೊಳ್ಳುವ ಪ್ಲಾನ್ ಬಜೆಟ್ ನಲ್ಲಿ ಘೋಷಿಸಲಿದ್ದಾರೆ.
  • ಕೊರೋನಾ ಸಂಕಷ್ಟದಿಂದಾಗಿ ಈ ಬಾರಿ ಯಾವುದೇ ತೆರಿಗೆ ಏರಿಕೆಯಿಲ್ಲ ಎಂಬುದಾಗಿ ಘೋಷಿಸಿದ್ದಾರೆ.
  • ಮದ್ಯದ ಮೇಲಿನ ತೆರಿಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳುವ ಮೂಲಕ, ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ನೀಡಿದರು.
Karnataka Budget 2021: 'ಎಣ್ಣೆ ಪ್ರಿಯ'ರಿಗೆ ಸಿಹಿ ಸುದ್ದಿ: ಅಬಕಾರಿ ಸುಂಕ ಹೆಚ್ಚಳವಿಲ್ಲ! title=

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಲಾಕ್ ಡೌನ್ ನಂತ್ರ ಉಂಟಾದಂತ ಆರ್ಥಿಕ ಸಂಕಷ್ಟದ ಸಲುವಾಗಿ ತೆರಿಗೆ ಸಂಗ್ರಹಣೆ ಮೂಲಕ ಬೊಕ್ಕಸ ತುಂಬಿಸಿಕೊಳ್ಳುವ ಪ್ಲಾನ್ ಬಜೆಟ್ ನಲ್ಲಿ ಘೋಷಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೊರೋನಾ ಸಂಕಷ್ಟದಿಂದಾಗಿ ಈ ಬಾರಿ ಯಾವುದೇ ತೆರಿಗೆ ಏರಿಕೆಯಿಲ್ಲ ಎಂಬುದಾಗಿ ಘೋಷಿಸಿದ್ದಾರೆ. ಈ ಮೂಲಕ ಮದ್ಯಪ್ರಿಯರಿಗೆ ಸಿಹಿಸುದ್ದಿ ನೀಡಿದ್ದಾರೆ.

ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ(BS Yediyurappa), ಪೆಟ್ರೋಲ್ ಮತ್ತು ಡೀಸೆಲ್ ಗಳ ಮೇಲೆ ವಿಧಿಸುವ ಕರ್ನಾಟಕ ಮಾರಾಟ ತೆರಿಗೆ ಸೇರಿದಂತೆ ಯಾವುದೇ ತೆರಿಗೆಯನ್ನು 2021-22ನೇ ಸಾಲಿನಲ್ಲಿ ಹೆಚ್ಚಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಘೋಷಿಸಿದರು.

Karnataka Budget 2021: ಮಾಶಾಸನ ಪಡೆಯುವ ವೃದ್ಧರು ಮತ್ತು ವಿದವೆಯರಿಗೆ ಭರ್ಜರಿ ಸಿಹಿ ಸುದ್ದಿ..!

ಅಲ್ಲದೇ 2021-22ನೇ ಆರ್ಥಿಕ ವರ್ಷಕ್ಕೆ ಅಬಕಾರಿ ಇಲಾಖೆಗೆ 24,580 ಕೋಟಿ ರೂ ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ ಪಡಿಸಲಾಗಿದೆ ಎಂಬುದಾಗಿ ತಿಳಿಸಿದ ಅವರು, ಮದ್ಯದ ಮೇಲಿನ ತೆರಿ(Tax)ಗೆ ಹೆಚ್ಚಳವಿಲ್ಲ ಎಂಬುದಾಗಿ ಹೇಳುವ ಮೂಲಕ, ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ನೀಡಿದರು.

Karnataka Budget 2021 : ಬಜೆಟ್‍ನಲ್ಲಿ ಕ್ರೀಡೆ, ಪ್ರವಾಸೋದ್ಯಮಕ್ಕೆ ಸಿಕ್ಕಿದ್ದೇನು..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News