ಪೊಲೀಸ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ..!

ಹೊಳೆನರಸೀಪುರ : ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಗುಂಪೊಂದು ಕಲ್ಲು ಮತ್ತು ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದೆ.  

Written by - Savita M B | Last Updated : Jun 17, 2023, 10:07 AM IST
  • ಪೊಲೀಸ್ ಪೇದೆ ಮೇಲೆ ಹಲ್ಲೆ
  • ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ
  • ಶರತ್ ಮೇಲೆ ಹಲ್ಲೆ ನಡೆಸುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪೊಲೀಸ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ..!  title=

Crime : ಆಲೂರು ತಾಲ್ಲೂಕಿನ ಕುಂದೂರು ಹೋಬಳಿ ಎಸ್.ಹೊನ್ನೇನಹಳ್ಳಿ ಗ್ರಾಮದ ಶರತ್ ಗಾಯಗೊಂಡಿರುವ ಪೇದೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶರತ್, ಜೂ.15 ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವರ ಮಗಳ ಹುಟ್ಟಿದ ಹಬ್ಬದ ಕಾರ್ಯಕ್ರಮಕ್ಕೆಂದು ಹೊಳೇನರಸೀಪುರ ತಾಲ್ಲೂಕು ಮಳಲಿ ದೇವಸ್ಥಾನಕ್ಕೆ ಹೋಗಿದ್ದರು.

ಇದನ್ನೂ ಓದಿ-ಆನ್‌ಲೈನ್‌ ಅರ್ಜಿ ಸ್ವೀಕಾರಕ್ಕೆ ಸಜ್ಜಾಗಿಲ್ವಾ ಸರ್ಕಾರ? ಸೈಬರ್‌ ಖದೀಮರ ಪಾಲಿಗೆ ವರವಾಗುತ್ತಾ 'ಗ್ಯಾರಂಟಿ'?

ಮಧ್ಯಾಹ್ನ ಸಮಯದಲ್ಲಿ ಸೋನಾ ಶ್ರೇಯ ಕನ್ವೆಕ್ಷನ್ ಹಾಲ್ ಮುಂಭಾಗ ಶರತ್ ಅವರ ಊರಿನ ಮಿಥುನ್, ಲೋಹಿತ್, ನಟರಾಜು ಎಂಬುವರು, ಚೇತನ್ ಎಂಬಾತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸುತ್ತಿದ್ದಾಗ ಶರತ್ ಬಿಡಿಸಲು ಹೋಗಿದ್ದಾರೆ.

ಈ ವೇಳೆ ಪೊಲೀಸ್ ಪೇದೆ ಶರತ್‌ಗೆ ಮೇಲೆ ನಟರಾಜ ಎಂಬಾತ ಕಾರಿನಿಂದ ಲಾಂಗ್ ತಂದು ಹಲ್ಲೆ ನಡೆಸಿದ್ದಾನೆ. ಗಾಯಾಳು ಶರತ್, ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.  ಶರತ್ ಮೇಲೆ ಹಲ್ಲೆ ನಡೆಸುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ-ನೆಹರು ಸ್ಮಾರಕದ ಮರುನಾಮಕರಣ; ಕೇಂದ್ರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News