ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ - ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ :ತನಿಖೆಗೆ ಕೋರ್ಟ್ ಆದೇಶ

Aruna Lakshmi : ಶಾಸಕ ಮತ್ತು ಮಾಜಿ ಸಚಿವ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಚುನಾವಣೆ ವೇಳೆ ಅರುಣಾ ಲಕ್ಷ್ಮೀ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

Written by - Ranjitha R K | Last Updated : Mar 8, 2024, 12:33 PM IST
  • ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್
  • ರಂಗರೆಡ್ಡಿ ಎಂಬವರ ದೂರಿನ ಆಧಾರದ ಮೇಲೆ ಎಫ್ ಐ ಆರ್
  • ತನಿಖೆ ಆರಂಭಿಸುವಂತೆ ನ್ಯಾಯಾಲಯ ಆದೇಶ
ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ - ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ :ತನಿಖೆಗೆ ಕೋರ್ಟ್ ಆದೇಶ    title=

ಬೆಂಗಳೂರು : ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ  ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಂಗರೆಡ್ಡಿ ಎಂಬವರ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ. 

ಅರುಣಾ ಲಕ್ಷ್ಮೀ ವಿರುದ್ದ ದೂರು : 
ಶಾಸಕ ಮತ್ತು ಮಾಜಿ ಸಚಿವ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಚುನಾವಣೆ ವೇಳೆ ಅರುಣಾ ಲಕ್ಷ್ಮೀ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ : Bengaluru Water Crisis: ಅನ್ಯ ಉದ್ದೇಶಕ್ಕೆ ಕುಡಿಯುವ ನೀರಿನ ಬಳಕೆ ನಿಷೇಧ:ನಿಯಮ ಉಲ್ಲಂಘಿಸಿದರೆ ಬೀಳುವುದು ಭಾರೀ ದಂಡ

ಮ್ಯಾಜಿಸ್ಟ್ರೇಟ್​​ ನ್ಯಾಯಾಲಯದಲ್ಲಿ ಅರ್ಜಿ :
ಅರುಣಾ ಲಕ್ಷ್ಮೀ ತಪ್ಪು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ರಂಗರೆಡ್ಡಿ ಎಂಬವರು  ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದರು. ಈ ದೂರಿನ ಆಧಾರದ ಮೇಲೆ ಇದೀಗ ಅರುಣ ಲಕ್ಷ್ಮೀ ವಿರುದ್ದ ಎಫ್ ಐ ಆರ್  ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅರುಣಾ ಲಕ್ಷ್ಮೀ ವಿರುದ್ದ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್​​ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.  

ತನಿಖೆಗೆ ಕೋರ್ಟ್ ಆದೇಶ : 
ತನಿಖೆಗೆ ಅವಕಾಶ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆ ನಂತರ ಕೂಡಲೇ ತನಿಖೆ ಆರಂಭಿಸುವಂತೆ ಆದೇಶ ನೀಡಿದೆ. ಪ್ರಜಾ ಪ್ರತಿನಿಧಿ ಕಾಯ್ದೆ-1951, 1988 ಸೆಕ್ಷನ್ 125 (a) ಅನ್ವಯ ಅರುಣಾ ಲಕ್ಷ್ಮೀ ವಿರುದ್ದ ಎಫ್​ಐಆರ್ ದಾಖಲಾಗಿದೆ. 

ಇದನ್ನೂ ಓದಿ : ಯಲಹಂಕ ವಿದ್ಯುತ್ ಸ್ಥಾವರ ಘಟಕ ಸ್ಥಗಿತಕ್ಕೆ ಸ್ಥಳೀಯ ನಿವಾಸಿಗಳಿಂದ ಆಗ್ರಹ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News