ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ ಇಲ್ಲಿಯವರೆಗೂ ಸಹ  ಸಿಬಿಐ ಯಾವುದೇ ದಾಖಲೆಗಳನ್ನು  ಲೋಕಾಯುಕ್ತಕ್ಕೆ ನೀಡಿಲ್ಲ.

Written by - VISHWANATH HARIHARA | Last Updated : Feb 13, 2024, 05:24 PM IST
  • ಡಿಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐರ್‌
  • ಸಿಬಿಐನಲ್ಲಿದ್ದ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ಸಿದ್ದತೆ
  • ಡಿಕೆ ಶಿವಕುಮಾರ್‌ಗೆ ಎದುರಾಗಿದೆ ಮತ್ತೊಂದು ಸಮಸ್ಯೆ .
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ title=

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐರ್‌ ದಾಖಲಿಸಿದ್ದಾರೆ. ಈ ಮೂಲಕ ಸಿಬಿಐನಲ್ಲಿದ್ದ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಮಸ್ಯೆ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ ಇಲ್ಲಿಯವರೆಗೂ ಸಹ  ಸಿಬಿಐ ಯಾವುದೇ ದಾಖಲೆಗಳನ್ನು  ಲೋಕಾಯುಕ್ತಕ್ಕೆ ನೀಡಿಲ್ಲ. ಇದನ್ನ ಹೊರತುಪಡಿಸಿ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿರುವ ಅನುಮತಿ ವಾಪಸ್‌ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ
ಡಿಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ವಾಪಸ್‌ ಪಡೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಕಾಂಗ್ರೆಸ್ ಸರ್ಕಾರ ಡಿಸೆಂಬರ್‌ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ ಇಲ್ಲಿಯವರೆಗೂ ಯಾವುದೇ  ಎಫ್‌ಐಆರ್‌ ದಾಖಲಾಗಿರಲಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ : 'ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ' ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ - ಸಿಎಂ ಸಿದ್ದರಾಮಯ್ಯ 

ಬಿಜೆಪಿ ಸರ್ಕಾರ 2019ರಲ್ಲಿ ಡಿಕೆ ವಿರುದ್ಧ ತನಿಖೆ ನಡೆಸಲು  ಅನುಮತಿ ನೀಡಿದ್ದರಿಂದ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನವೆಂಬರ್ 23 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್‌ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಕಾಂಗ್ರೆಸ್ ಸರ್ಕಾರ ಅನುಮತಿ ನಿರಾಕರಿಸಿತ್ತು.

ಇದಾದ ಮೇಲೆ  ಸಿಬಿಐ ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಜೊತೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದರು. ಈ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ಸೋಮಶೇಖರ್‌ ಮತ್ತು ಉಮೇಶ್‌ ಅಡಿಗ ಅವರಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠ ನಡೆಸುತ್ತಿದೆ. ಇತ್ತ ಸಿಬಿಐ ಅಧಿಕಾರಿಗಳು ತನಿಖೆ ಕೊನೆ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ವಾಪಸ್‌ ಪಡೆಯುವುದು ಸರಿಯಲ್ಲ ಎಂದು ವಾದಿಸಿದೆ‌. ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ಇನ್ನೂ ನಡೆಯುತ್ತಿದ್ದು, ಲೋಕಾಯುಕ್ತ ಪೊಲೀಸರು ಯಾವ ರೀತಿ ತನಿಖೆ ನಡೆಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

ಇದನ್ನೂ ಓದಿ : ನೀರಾವರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News