ಸುಪ್ರೀಂ ಸೂಚನೆ ಹಿನ್ನೆಲೆಯಲ್ಲಿ ಪ್ರಭಾರ ಬಿಡಿಎ ಆಯುಕ್ತರಾಗಿ ಜಿ.ಕುಮಾರ್ ನಾಯಕ್

ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಬೆನ್ನಲ್ಲೇ ಈಗ ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಪ್ರಭಾರ ಆಯುಕ್ತರಾಗಿ ಐಎಎಸ್‌ ಅಧಿಕಾರಿ ಜಿ.ಕುಮಾರ್ ನಾಯಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Written by - Zee Kannada News Desk | Last Updated : Aug 26, 2022, 08:51 PM IST
  • ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಈಗ ಜಿ.ಕುಮಾರ್ ನಾಯಕ್ ಅವರನ್ನು ಸರ್ಕಾರ ನೇಮಕ ಮಾಡಿದೆ.
ಸುಪ್ರೀಂ ಸೂಚನೆ ಹಿನ್ನೆಲೆಯಲ್ಲಿ ಪ್ರಭಾರ ಬಿಡಿಎ ಆಯುಕ್ತರಾಗಿ ಜಿ.ಕುಮಾರ್ ನಾಯಕ್  title=
Photo Courtsey: Facebook

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಬೆನ್ನಲ್ಲೇ ಈಗ ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಪ್ರಭಾರ ಆಯುಕ್ತರಾಗಿ ಐಎಎಸ್‌ ಅಧಿಕಾರಿ ಜಿ.ಕುಮಾರ್ ನಾಯಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈಗ ಸುಪ್ರೀಂ ಕೋರ್ಟ್‌ ಬಿಡಿಎ ಆಯುಕ್ತರನ್ನು ವರ್ಗಾಯಿಸುವಂತೆ ಮೌಖಿಕವಾಗಿ ಆದೇಶಿಸಿದ ಬೆನ್ನಲ್ಲೇ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ.ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಈಗ ಜಿ.ಕುಮಾರ್ ನಾಯಕ್ ಅವರನ್ನು ಸರ್ಕಾರ ನೇಮಕ ಮಾಡಿದೆ.

ಇದನ್ನೂ ಓದಿ: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲ ಅಧಿವೇಶನ

 

 

50 ಕೋಟಿ ರೂ ಮೌಲ್ಯದ ಜಿ ವರ್ಗದ ಸೈಟ್ ಗಳ ಅಕ್ರಮ ಹಂಚಿಕೆ ವಿಚಾರವಾಗಿ ಬಿಡಿಎ ಆಯುಕ್ತ  ರಾಜೇಶ್ ಗೌಡ ಎಂ. ಬಿ ವಿರುದ್ದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗ ಕೊನೆಗೂ ಸುಪ್ರೀಂ ಕೋರ್ಟ್ ನ ಆದೇಶಕ್ಕೆ ಅನುಗುಣವಾಗಿ ಅವರನ್ನು ವರ್ಗಾವಣೆ ಮಾಡಿ ನೂತನ ಆಯುಕ್ತರನ್ನು ನೇಮಕ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News