ಗೌರಿ ಲಂಕೇಶ್ ಹತ್ಯೆ ಆರೋಪಿ ಮಂಪರು ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

Last Updated : Mar 12, 2018, 06:28 PM IST
ಗೌರಿ ಲಂಕೇಶ್ ಹತ್ಯೆ ಆರೋಪಿ ಮಂಪರು ಪರೀಕ್ಷೆಗೆ ನ್ಯಾಯಾಲಯ ಅನುಮತಿ title=

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ವಿಶೇಷ ತನಿಖಾ ತಂಡಕ್ಕೆ ನ್ಯಾಯಾಲಯ ಅನುಮತಿ ನೀಡಿ, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಮಾರ್ಚ್​ 26ರವರಗೆ ವಿಸ್ತರಿಸಿದೆ.

ಕಳೆದ ಮಾರ್ಚ್ 9ರಂದು ನವೀನ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೊಳಪಡಿಸಲು ಎಸ್ಐಟಿ ನ್ಯಾಯಾಲಯದ ಅನುಮತಿ ಕೋರಿತ್ತು. ಈ ಸಂಬಂಧ ಇಂದು ವಿಚಾರಣೆ ಆಲಿಸಿದ ನಗರದ 3ನೇ ಎಸಿಎಂಎಂ ನ್ಯಾಯಾಧೀಶ​ ವೆಂಕಣ್ಣ ಹೊಸಮನಿ ಮಂಪರು ಪರೀಕ್ಷೆಗೆ ಆದೇಶ ನೀಡಿದ್ದು, ತನಿಖೆ ನಡೆಸುವಂತೆ ಎಸ್​​ಐಟಿಗೆ ಸೂಚಿಸಿದ್ದಾರೆ.

ಮಂಪರು ಪರೀಕ್ಷೆಗೆ ಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹೈದರಾಬಾದ್​ ಅಥವಾ ಅಹಮದಾಬಾದ್​ನ ಮಂಪರು ಪರೀಕ್ಷಾ ಕೇಂದ್ರದ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ, ಆತನನ್ನು ಪರೀಕ್ಷೆಗೆ ಕರೆದೊಯ್ಯಲಾಗುವುದು ಎಂದು ವಿಶೇಷ ತನಿಖಾ ತಂಡ(ಎಸ್​ಐಟಿ) ತಿಳಿಸಿದೆ. 

Trending News