ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ

ಒಂದು ಲಕ್ಷ ರೂ. ಹೊರೆ ಕಡಿಮೆ ಮಾಡಲು ಒಪ್ಪಿದ ಸಿದ್ದರಾಮಯ್ಯ  ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಸಿ ಎಂ ಮನವೊಲಿಸುವಲ್ಲಿ ಯಶಸ್ವಿ 

Written by - Ranjitha R K | Last Updated : Jul 25, 2024, 06:31 PM IST
ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ  - ಮಹತ್ವದ ನಿರ್ಧಾರ ತೆಗೆದುಕೊಂಡ ಸರ್ಕಾರ  title=

ಬೆಂಗಳೂರು : ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ  ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ  ಸಿಹಿ ಸುದ್ದಿ ಸಿಕ್ಕಿದೆ.  ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನ ಸೌಧದ ಮುಖ್ಯಮಂತ್ರಿ ಯವರ ಕಚೇರಿಯಲ್ಲಿ  ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯವರ ಮನವೊಲಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ : 4.73 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಿದ್ದ ಸರ್ಕಾರಿ ಶಾಲಾ ಕೊಠಡಿ ಲೋಕಾರ್ಪಣೆ 

ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಯೋಜನೆ ಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು.ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು.ನಂತರ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಇದೀಗ ಸರ್ಕಾರದ ಮಹತ್ವದ ತೀರ್ಮಾನ ದಿಂದ  ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, ಎಸ್ ಸಿ -ಎಸ್ ಟಿ ವರ್ಗ 6.70 ಲಕ್ಷರೂ.ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬ ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.

ಇದನ್ನೂ ಓದಿ : ಈ ವರ್ಷ 38 ಲಕ್ಷಕ್ಕೂ ಅಧಿಕ ರೈತರಿಗೆ ಬರಪರಿಹಾರ ವಿತರಣೆ

ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ ಅನ್ವಯ ಆಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .

Trending News