ಮಂಡ್ಯದ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದರೆ, ಅನುದಾನ ಬಿಡುಗಡೆ ಮಾಡಲು ಸಿದ್ಧ: ಸಿಎಂ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Last Updated : Nov 23, 2018, 06:58 PM IST
ಮಂಡ್ಯದ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದರೆ, ಅನುದಾನ ಬಿಡುಗಡೆ ಮಾಡಲು ಸಿದ್ಧ: ಸಿಎಂ title=

ಮಂಡ್ಯ: ಮಂಡ್ಯದ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದರೆ, ಅನುದಾನ ಬಿಡುಗಡೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂ ಅತಿಥಿ ಗೃಹದಲ್ಲಿ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಸಂಸದರಾದ ಶಿವರಾಮೇಗೌಡ, ಕೆ.ಆರ್.ಪೇಟೆ ಶಾಸಕರಾದ  ನಾರಾಯಣಸ್ವಾಮಿ, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರ ಸಮ್ಮುಖದಲ್ಲಿ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚಿಸಿದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಬೇಕಾಗುವ ಕಾರ್ಯಕ್ರಮಗಳನ್ನು ರೂಪಿಸಿ ಯೋಜನೆ ಸಿದ್ಧ ಪಡಿಸಿದರೆ, ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಈ ಸಂಬಂಧ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ಸಿಎಂ ತಿಳಿಸಿದರು.

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ  ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಇದೇ ವೇಳೆ ತಿಳಿಸಿದರು.
 

Trending News