ಐದು ಗ್ಯಾರಂಟಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ದಿ: ಸಚಿವ ಸಂತೋಷ ಲಾಡ್

Five Guarantees: ಈ ಹಿಂದೆ ಕೇವಲ 20 ತಿಂಗಳ ಕಾಲ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು.‌ ಈಗ ಮತ್ತೆ ಅದೆ ಖಾತೆ ಸಿಕ್ಕೆದೆ ಹೆಚ್ಚಿನ ಕೆಲಸ ಮಾಡುವ ಗುರಿಯಿದೆ. ಸಾಕಷ್ಟು ಹೊಸ ಹೊಸ ಯೋಜನೆ ತರುವ ಆಶೆ ಇದೆ. ಕಾರ್ಮಿಕರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡುವೆ ಎಂದು ಭರವಸೆ ನೀಡಿದರು.

Written by - Yashaswini V | Last Updated : May 30, 2023, 08:55 AM IST
  • ಕಾರ್ಮಿಕ ಕಲ್ಯಾಣ ನಿಧಿಯನ್ನು ಬಿಜೆಪಿ ದುರ್ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್
  • ಈ ಹಿಂದೆ ಭಾರತೀಯ ಜನತಾ ಪಕ್ಷದ ಸರ್ಕಾರ ಇದ್ದಾಗ ಸಾಕಷ್ಟು ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿದ್ದು ತನಿಖೆ ಮಾಡಲಾಗುವುದು.
  • ಈಗಾಗಲೇ ಮೊದಲು ರೆವಿನ್ಯೂ ಮೀಟಿಂಗ್ ಮಾಡಿರುವೆ.. ಯಾವ ಯಾವ ಆರೋಪಗಳು ನಡೆದಿವೆ ಎಂಬುದರ ಬಗ್ಗೆ ಪರಿಶೀಲಿಸಿದ ಬಳಿಕ ಮಾತನಾಡುವುದಾಗಿ ತಿಳಿಸಿದರು.
ಐದು ಗ್ಯಾರಂಟಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ದಿ:  ಸಚಿವ ಸಂತೋಷ ಲಾಡ್ title=

Five Congress guarantees: ಚುನಾವಣಾ ಸಂದರ್ಭದಲ್ಲಿ ನಾವು ನೀಡಿದ ಐದು ಗ್ಯಾರಂಟಿಗಳ ಕುರಿತು ಗುರುವಾರ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಆಗಲಿದೆ. ಇನ್ನೆರಡು ದಿನಗಳಲ್ಲಿ ನಾವು ನೀಡಿದ್ದ ಐದು ಗ್ಯಾರಂಟಿಗಳ ಕುರಿತು ಗುಡ್ ನ್ಯೂಸ್ ದೊರೆಯಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ  ಕಾರ್ಮಿಕ ಸಚಿವ ಸಂತೋಷ ಲಾಡ್, ಇಂದು ಕಲಘಟಗಿ, ಅಳ್ನಾವರ ಮತ್ತು ಹುಬ್ಬಳ್ಳಿ ಧಾರವಾಡ ಪ್ರವಾಸ ಮಾಡುತ್ತಿರುವೆ. ಧಾರವಾಡ ಜಿಲ್ಲೆಯ ಕಲಘಟಗಿ ಹಾಗೂ ಅಳ್ನಾವರ ಕ್ಷೇತ್ರದ ಜನತೆಗೆ ಗೌರವ ಮತ್ತು ಅಭಿನಂದನೆ ಸಲ್ಲಿಸಲು ಬಂದಿದ್ದೇನೆ.  ಅವರಿಗೆ ಪ್ರೀತಿಯಿಂದ ಗೌರವಿಸಬೇಕಾಗಿದೆ ಎಂದರು‌. 

ಇದನ್ನೂ ಓದಿ- ಸರ್ಕಾರಿ ಪಬ್ಲಿಕ್‌ ಸ್ಕೂಲ್‌ಗಳಿಗೆ ಹೆಚ್ಚಿದ ಡಿಮ್ಯಾಂಡ್‌

ಖಾತೆ ಹಂಚಿಕೆ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ: 
ಈ ಹಿಂದೆ ಕೇವಲ 20 ತಿಂಗಳ ಕಾಲ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು.‌ ಈಗ ಮತ್ತೆ ಅದೆ ಖಾತೆ ಸಿಕ್ಕೆದೆ ಹೆಚ್ಚಿನ ಕೆಲಸ ಮಾಡುವ ಗುರಿಯಿದೆ. ಸಾಕಷ್ಟು ಹೊಸ ಹೊಸ ಯೋಜನೆ ತರುವ ಆಶೆ ಇದೆ. ಕಾರ್ಮಿಕರಿಗಾಗಿ ಒಳ್ಳೆಯ ಕೆಲಸಗಳನ್ನು ಮಾಡುವೆ ಎಂದು ಭರವಸೆ ನೀಡಿದರು. 

ಇದನ್ನೂ ಓದಿ- ವಿಪಕ್ಷಗಳ ಗ್ಯಾರಂಟಿ ಟೀಕೆಗೆ ಡಿ.ಕೆ.ಶಿವಕುಮಾರ್‌ ಕೌಂಟರ್‌

ಈ ಸಂದರ್ಭದಲ್ಲಿ ಕಾರ್ಮಿಕ ಕಲ್ಯಾಣ ನಿಧಿಯನ್ನು ಬಿಜೆಪಿ ದುರ್ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಸಚಿವ ಸಂತೋಷ್ ಲಾಡ್, ಈ ಹಿಂದೆ ಭಾರತೀಯ ಜನತಾ ಪಕ್ಷದ ಸರ್ಕಾರ ಇದ್ದಾಗ ಸಾಕಷ್ಟು ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿದ್ದು ತನಿಖೆ ಮಾಡಲಾಗುವುದು. ಈಗಾಗಲೇ ಮೊದಲು ರೆವಿನ್ಯೂ ಮೀಟಿಂಗ್ ಮಾಡಿರುವೆ.. ಯಾವ ಯಾವ ಆರೋಪಗಳು ನಡೆದಿವೆ ಎಂಬುದರ ಬಗ್ಗೆ ಪರಿಶೀಲಿಸಿದ ಬಳಿಕ ಮಾತನಾಡುವುದಾಗಿ ತಿಳಿಸಿದರು. 

ಇನ್ನು ಸಚಿವರಾಗಿ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಸಂತೋಷ ಲಾಡ್ ಅವರಿಗೆ ಮೊದಲು ಭರ್ಜರಿ ಸ್ವಾಗತ ಕೋರಲಾಯಿತು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಮತ್ತು ಬೆಂಬಲಿಗರು ಆಗಮಿಸಿ ಶುಭ ಕೋರಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News