ಕೇಂದ್ರದಿಂದ GST ಮೋಸ: ಬಹಿರಂಗ ಚರ್ಚೆಗೆ ನಾನು ಸಿದ್ಧ, ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ?

ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕೃಷ್ಣ ಬೈರೇಗೌಡ  ಕಿಡಿಕಾರಿದ್ದಾರೆ. 

Written by - Prashobh Devanahalli | Edited by - Puttaraj K Alur | Last Updated : Apr 5, 2024, 07:32 PM IST
  • ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ
  • GST ಮೋಸದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧವಾಗಿದ್ದೇನೆ
  • ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ? ಎಂದ ಕೃಷ್ಣ ಬೈರೇಗೌಡ
ಕೇಂದ್ರದಿಂದ GST ಮೋಸ: ಬಹಿರಂಗ ಚರ್ಚೆಗೆ ನಾನು ಸಿದ್ಧ, ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ? title=
ನಿರ್ಮಲಾ ಸೀತಾರಾಮನ್‌ಗೆ ಬೈರೇಗೌಡ ಸವಾಲು!

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸತತವಾಗಿ ಅನ್ಯಾಯವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ GST ತೆರಿಗೆ ಹಂಚಿಕೆ ವಿಚಾರದಲ್ಲಂತೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಿರಂಗವಾಗಿಯೇ ಅನ್ಯಾಯ ಎಸಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಹೀಗಾಗಿ ಕೇಂದ್ರದಿಂದ ಆಗುತ್ತಿರುವ GST ಮೋಸದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧರಿದ್ದಾರಾ? ಎಂದು ಸಚಿವ ಕೃಷ್ಣ ಬೈರೇಗೌಡ ಸವಾಲು ಹಾಕಿದ್ದಾರೆ. 

ಕೇಂದ್ರದಿಂದ ಕರ್ನಾಟಕಕ್ಕೆ ಆಗುತ್ತಿರುವ GST ಅನ್ಯಾಯದ ಬಗ್ಗೆ ಮಾತನಾಡಿರುವ ಅವರು, ಹಣಕಾಸು ಆಯೋಗ 2020-21ನೇ ಸಾಲಿನ ಅಂತಿಮ ವರದಿಯಲ್ಲಿ ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಅಲ್ಲದೆ 2021-26ನೇ ಸಾಲಿನ ವರದಿಯಲ್ಲೂ 6,000 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿದೆ. ಒಟ್ಟಾರೆ ಕೇಂದ್ರದಿಂದ ಕರ್ನಾಟಕಕ್ಕೆ 11,495 ಕೋಟಿ ರೂ. ಹಣ ವಿಶೇಷ ಅನುದಾನದ ರೂಪದಲ್ಲಿ ಬರಬೇಕಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೂವಿಗೆ ಫುಲ್‌ ಡಿಮ್ಯಾಂಡ್

ಆದರೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸು ಆಯೋಗ ಅಂತಹದ್ದೊಂದು ಶಿಫಾರಸು ಮಾಡೇ ಇಲ್ಲ. ನಾವು ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ತಿದ್ದಲು ಹೋಗುವುದಿಲ್ಲ ಎಂದು ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಾ ರಾಜ್ಯಕ್ಕೆ ಅನ್ಯಾಯವೆಸಗುತ್ತಿದ್ದಾರೆ. ಒಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನೀಡಬೇಕಾದ ಬರ ಪರಿಹಾರದ ಬಗ್ಗೆ ಸುಳ್ಳು ಹೇಳುತ್ತಿದ್ದರೆ, ನಿರ್ಮಲಾ ಸೀತಾರಾಮನ್ ಅವರಂತೂ ತೆರಿಗೆ ಹಂಚಿಕೆ ಹಾಗೂ ಹಣಕಾಸು ಆಯೋಗದ ಶಿಫಾರಸಿನ ಬಗ್ಗೆ ಹಲವು ದಿನಗಳಿಂದಲೂ ಸರಣಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಇದರಿಂದ ಜನರೂ ಸಹ ಗೊಂದಲಕ್ಕೀಡಾಗಿದ್ದಾರೆ. ತೆರಿಗೆ ಹಂಚಿಕೆ ಬಗ್ಗೆ ರಾಜ್ಯ ಸರ್ಕಾರ ಹೇಳುತ್ತಿರುವುದು ನಿಜವೇ? ಅಥವಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳುತ್ತಿರುವುದು ನಿಜವೇ? ಎಂಬ ಗೊಂದಲ ಅವರನ್ನೂ ಕಾಡುತ್ತಿರುವುದು ಸುಳ್ಳಲ್ಲ. ಹೀಗಾಗಿ ಯಾವುದು ಸತ್ಯ? ಯಾವುದು ಸುಳ್ಳು? ಎಂದು ತಿಳಿದುಕೊಳ್ಳುವ ಸಲುವಾಗಿ ರಾಜ್ಯದ ಒಂದಷ್ಟು ಪ್ರಜ್ಞಾವಂತ ಜನ ಸಮೂಹ ಒಂದಾಗಿ ಬಹಿರಂಗ ಚರ್ಚೆಗೆ ವೇದಿಕೆ ಸಿದ್ದಪಡಿಸಿದೆ. ಏಪ್ರಿಲ್ 6ರ ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಕಂದಾಯ ಸಚಿವ ಹಾಗೂ GST ಮಂಡಳಿ ಸದಸ್ಯನಾಗಿರುವ ನನ್ನನ್ನು ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಕೋಲಾರದಿಂದಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ

ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲು ನಾನು ಈಗಾಗಲೇ ಒಪ್ಪಿಗೆ ಸೂಚಿಸಿದ್ದೇನೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವ ಸ್ಥಾನವನ್ನೂ ಅಲಂಕರಿಸಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಈ ಚರ್ಚೆಯಲ್ಲಿ ಪಾಲ್ಗೊಂಡು GST ತೆರಿಗೆ ಹಂಚಿಕೆ ಕುರಿತು ರಾಜ್ಯದ ಜನ ಸಾಮಾನ್ಯರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಈ ಮೂಲಕ ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News