ಬೆಳೆಸಾಲಮನ್ನಾ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಹೆಚ್‌ಡಿಕೆ

ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದು ಎಂದು ಸಹಾಯವಾಣಿ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.

Last Updated : Nov 4, 2019, 11:02 AM IST
ಬೆಳೆಸಾಲಮನ್ನಾ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಹೆಚ್‌ಡಿಕೆ  title=
File image

ಬೆಂಗಳೂರು: ರೈತರಿಗೆ ಬೆಳೆ ಸಾಲಮನ್ನಾ ಕುರಿತಂತೆ ಮಾಹಿತಿ ನೀಡಲು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 'ಬೆಳೆ ಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಅಕ ಈ ಬಗ್ಗೆ ಮಾಹಿತಿ ನೀಡಿರುವ ಹೆಚ್‌ಡಿಕೆ, 'ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ 'ಬೆಳೆಸಾಲಮನ್ನಾ ಸಹಾಯವಾಣಿ' ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು' ಎಂದು ತಿಳಿಸಿದ್ದಾರೆ.

Trending News