ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿಜಾಬ್ ವಿವಾದ, ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್ ಸಿಬಲ್ ಆಗ್ರಹ

ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ವಿಷಯವನ್ನು ಆಲಿಸಲು ಮತ್ತು ನಿರ್ಧರಿಸಲು ಅವಕಾಶ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.   

Written by - Ranjitha R K | Last Updated : Feb 10, 2022, 01:28 PM IST
  • ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ
  • ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್ ಸಿಬಲ್ ಒತ್ತಾಯ
  • ಹೈಕೋರ್ಟ್ ನಲ್ಲಿ ನಡೆಯುತ್ತಿದೆ ವಿಚಾರಣೆ : ಸುಪ್ರಿಂಕೋರ್ಟ್
ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹಿಜಾಬ್ ವಿವಾದ,  ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್  ಸಿಬಲ್ ಆಗ್ರಹ  title=
ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ (file photo)

ನವದೆಹಲಿ : ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ (Hijab Contraversy) ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ. ಹಿಜಾಬ್ ವಿವಾದವನ್ನು ಕರ್ನಾಟಕ ಹೈಕೋರ್ಟ್‌ನಿಂದ (Karnataka High Court) ತನ್ನ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಹೈಕೋರ್ಟ್ ನಲ್ಲಿ ನಡೆಯುತ್ತಿದೆ  ವಿಚಾರಣೆ : ಸುಪ್ರಿಂಕೋರ್ಟ್ 
ಕರ್ನಾಟಕ ಹೈಕೋರ್ಟ್ (Karnataka High Court) ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ವಿಷಯವನ್ನು ಆಲಿಸಲು ಮತ್ತು ನಿರ್ಧರಿಸಲು ಅವಕಾಶ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. 

ಇದನ್ನೂ ಓದಿ : Hijab Row: ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಹತ್ತಿರ ಎರಡು ವಾರಗಳ ಕಾಲ ಪ್ರತಿಭಟನೆಗೆ ನಿಷೇಧ

ಅರ್ಜಿ ಸಲ್ಲಿಸಿದ ಕಪಿಲ್ ಸಿಬಲ್ : 
ಒಂಬತ್ತು ನ್ಯಾಯಾಧೀಶರ ಪೀಠದಿಂದ ಈ ಪ್ರಕರಣದ ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ಮನವಿ ಮಾಡಿದ್ದಾರೆ. ಅಲ್ಲದೆ, ಶಾಲಾ ಮತ್ತು ಕಾಲೇಜುಗಳನ್ನು ಮುಚ್ಚಿರುವುದು ಸಮಸ್ಯೆಯಾಗಿದೆ. ಹೆಣ್ಣುಮಕ್ಕಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಈ ವಿವಾದ ದೇಶಾದ್ಯಂತ ಹಬ್ಬುತ್ತಿದೆ ಎಂದು ಅವರು ಹೇಳಿದ್ದಾರೆ. 

ನಾವು ಅದನ್ನು ಪರಿಶೀಲಿಸುತ್ತೇವೆ: ಸಿಜೆಐ
ಈ ವಿಷಯದ ಬಗ್ಗೆ ಯಾವುದೇ ಆದೇಶವನ್ನು ಬಯಸುವುದಿಲ್ಲ. ಆದರೆ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕೆಂದು ಕಪಿಲ್ ಸಿಬಲ್ ಆಗ್ರಹಿಸಿದ್ದಾರೆ. ಇದಾದ ಬಳಿಕ ಮುಖ್ಯ ನ್ಯಾಯಮೂರ್ತಿಗಳು, ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. 

ಇದನ್ನೂ ಓದಿ : ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ನಮ್ಮ ದೇಶಕ್ಕೆ ಪಾಠ ಮಾಡಬೇಡಿ: ಪಾಕ್​ಗೆ ಓವೈಸಿ ತಿರುಗೇಟು

ಇಂದು ಹೈಕೋರ್ಟ್ ನಲ್ಲಿ ವಿಚಾರಣೆ :
ಗುರುವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್‌ನಲ್ಲಿ  ಹಿಜಾಬ್ ವಿವಾದ(Hijab Contraversy)  ಪ್ರಕರಣದ ಅರ್ಜಿಗಳ ವಿಚಾರಣೆ ನಡೆಯಲಿದೆ. ಇದಕ್ಕೂ ಮುನ್ನ ಬುಧವಾರ, ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ದೀಕ್ಷಿತ್, ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News