ಕೋರ್ಟ್ ಆದೇಶ ಪಾಲಿಸಿ ತಮಿಳುನಾಡಿಗೆ ನೀರು ಬಿಡುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್ 

Written by - VISHWANATH HARIHARA | Last Updated : Sep 27, 2023, 01:47 PM IST
  • ಸೆಪ್ಟೆಂಬರ್ 29ರ ಕರ್ನಾಟಕ ಬಂದ್ ಮಾಡಬೇಡಿ ಅಂತಾ ಸಂಘಟನೆಗಳಲ್ಲಿ ಮನವಿ ಮಾಡುತ್ತೇನೆ.
  • ಬೇಕಾದರೆ ಕಾನೂನು ಚೌಕಟ್ಟಿನಲ್ಲಿ ಪ್ರೊಟೆಸ್ಟ್ ಮಾಡಿಕೊಳ್ಳಿ, ಬಂದ್ ನಡೆಸಬೇಡಿ.
  • ಬಂದ್ ನಿಂದ ಯಾವುದೇ ಪ್ರಯೋಜನ ಇಲ್ಲ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಕೋರ್ಟ್ ಆದೇಶ ಪಾಲಿಸಿ ತಮಿಳುನಾಡಿಗೆ ನೀರು ಬಿಡುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್ title=

ಬೆಂಗಳೂರು: ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಮಾಡದಂತೆ ಗೃಹ ಸಚಿವ ಪರಮೇಶ್ವರ್ ಹೋರಟಗಾರರಿಗೆ ಮನವಿ ಮಾಡಿದ್ದಾರೆ‌. 

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಪೊಲೀಸರು ಜವಬ್ದಾರಿಯಿಂದ ಕೆಲಸ ನಿರ್ವಹಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. 

ಇದನ್ನೂ ಓದಿ- 3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಬಂದ್ ಮಾಡದಂತೆ ಮನವಿ: 
ಸೆಪ್ಟೆಂಬರ್ 29ರ ಕರ್ನಾಟಕ ಬಂದ್ ಮಾಡಬೇಡಿ ಅಂತಾ ಸಂಘಟನೆಗಳಲ್ಲಿ ಮನವಿ ಮಾಡುತ್ತೇನೆ. ಬೇಕಾದರೆ  ಕಾನೂನು ಚೌಕಟ್ಟಿನಲ್ಲಿ ಪ್ರೊಟೆಸ್ಟ್ ಮಾಡಿಕೊಳ್ಳಿ, ಬಂದ್ ನಡೆಸಬೇಡಿ. ಬಂದ್ ನಿಂದ ಯಾವುದೇ ಪ್ರಯೋಜನ ಇಲ್ಲ. ಕಾವೇರಿ ನೀರು ಪ್ರಾಧಿಕಾರಿ ನೀಡಿರುವ ಆದೇಶ ಪಾಲಿಸೋದು ಅನಿವಾರ್ಯ ಎಂದರು. 

ಇದನ್ನೂ ಓದಿ- ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸೆಪ್ಟೆಂಬರ್ 29 ಕ್ಕೂ ಪೊಲೀಸ್ ಇಲಾಖೆಯಿಂದ ಭದ್ರತೆ ಮಾಡಿಕೊಳ್ಳಲಾಗುತ್ತೆ. ಈಗಾಗಲೇ ಡಿಜಿಯವರು ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಭದ್ರತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾರಾದರು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದ್ರೆ ಕ್ರಮ ತೆಗೆದುಕೊಳ್ಳಲಾಗುತ್ತೆ. ಶಾಂತಿಯುತವಾಗಿ ಬಂದ್ ಮಾಡುವಂತೆ ಗೃಹ ಸಚಿವ ಪರಮೇಶ್ವರ್ ಹೋರಾಟಗಾರರಿಗೆ ಮನವಿ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News