Uri Gowda Nanje Gowda Movie : 'ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವಿಲ್ಲ'

ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

Written by - Channabasava A Kashinakunti | Last Updated : Mar 20, 2023, 08:35 AM IST
  • ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ
  • ಉರಿಗೌಡ ನಂಜೇಗೌಡ ಇದ್ದದ್ದು ಸತ್ಯ
  • ಸುವರ್ಣ ಮಂಡ್ಯ ಪುಸ್ತಕ ಯಾರು ಬರೆದಿದ್ದು?
Uri Gowda Nanje Gowda Movie : 'ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವಿಲ್ಲ' title=

ಬೆಂಗಳೂರು : ಸಚಿವ ಸಹೋದ್ಯೋಗಿ ಮುನಿರತ್ನ ಅವರು ನಿರ್ಮಿಸುತ್ತಿರುವ ಉರಿಗೌಡ ನಂಜೇಗೌಡ ಸಿನಿಮಾದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದಕ್ಕೆ ನಾನು ಚಿತ್ರಕತೆಯನ್ನೇನೂ ಬರೆಯುತ್ತಿಲ್ಲ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಭಾನುವಾರ ಪ್ರತಿಕ್ರಿಯೆ ನೀಡಿರುವ ಸಚಿವ ಅಶ್ವತ್ಥನಾರಾಯಣ, ಟಿಪ್ಪುವನ್ನು ಕೊಂದ ವೀರಸೇನಾನಿಗಳಾದ ಉರಿಗೌಡ ಮತ್ತು ನಂಜೇಗೌಡರ ಬಗ್ಗೆ ನನಗೆ ನೈಜ ಅಭಿಮಾನವಿದೆ. ಅವರ ಬಗ್ಗೆ ನಾನು ಇದುವರೆಗೂ ಆಡಿರುವ ಮಾತುಗಳಿಗೆ ನಾನು ಬದ್ಧನಾಗಿದ್ದೇನೆ. ಆದರೆ ಸಿನಿಮಾದ ಭಾಗವಾಗುತ್ತಿಲ್ಲ ಎಂದರು. 

ಇದನ್ನೂ ಓದಿ : ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?

ಹೆಚ್‌ಡಿಕೆಗೆ ಟಾಂಗ್ ಕೊಟ್ಟ ಅಶ್ವಥ್ ನಾರಾಯಾಣ್

ಉರಿಗೌಡ ನಂಜೇಗೌಡ ಇದ್ದದ್ದು ಸತ್ಯ. ಟಿಪ್ಪುವನ್ನು ಪಡೆದುಕೊಂಡಿದ್ದೇನು? ಟಿಪ್ಪುವನ್ನು ಎಂದೆಂದಿಗೂ ವಿರೋಧಿಸೋದೆ. ಸುವರ್ಣ ಮಂಡ್ಯ ಪುಸ್ತಕ ಯಾರು ಬರೆದಿದ್ದು?  ಆ ಪುಸ್ತಕದಲ್ಲಿ ಆ ಎರಡು ಹೆಸರು ಕಾಲ್ಪನಿಕಾನಾ? ವಿರೋಧ ಮಾಡುವವರು ಮಾಡ್ತಾರೆ. ಅಧ್ಯಯನ ಮಾಡಿ ಎಲ್ಲ ವಿಚಾರಗಳನ್ನು ಬರುವಂಥದ್ದು ಮಾಡಲಿ . ಟಿಪ್ಪು ಸುಲ್ತಾನ್ ಫೋಟೋಗಳನ್ನು ತೆಗೆದುಕೊಂಡು ಹೋಗಿ ಅವ್ರ ಮನೆಯಲ್ಲಿ, ಕಾರುಗಳ ಮೇಲೆ ಅಂಟಿಸಿಕೊಳ್ಳಲಿ ಎಂದು ಹೆಚ್‌.ಡಿ. ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. 

ಇದನ್ನೂ ಓದಿ : ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ; ಕಾಲಮಿತಿಯಲ್ಲಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News