ಬಿಜೆಪಿ 'ಸೋಮನಹಳ್ಳಿ ಮುದುಕಿ ಕಥೆ' ಆಗಿದೆ: ಡಿ.6ರ ನಂತರ ಎಲ್ಲವನ್ನೂ ಹೇಳುತ್ತೇನೆ: ವಿ.ಸೋಮಣ್ಣ

ರಾಜಕಾರಣ ದೊಂಬರಾಟ ಅಲ್ಲ, ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ ಅಂತಾ ವಿ.ಸೋಮಣ್ಣ ಹೇಳಿದ್ದಾರೆ.

Written by - Puttaraj K Alur | Last Updated : Nov 23, 2023, 08:42 PM IST
  • ರಾಜಕಾರಣ ದೊಂಬರಾಟ ಅಲ್ಲ, ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ
  • ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ
  • ಡಿಸೆಂಬರ್ 6ಕ್ಕೆ ನನಗೆ ಆದ ಅನ್ಯಾಯದ ಬಗ್ಗೆ ಹೇಳುತ್ತೇನೆಂದ ವಿ.ಸೋಮಣ್ಣ
ಬಿಜೆಪಿ 'ಸೋಮನಹಳ್ಳಿ ಮುದುಕಿ ಕಥೆ' ಆಗಿದೆ: ಡಿ.6ರ ನಂತರ ಎಲ್ಲವನ್ನೂ ಹೇಳುತ್ತೇನೆ: ವಿ.ಸೋಮಣ್ಣ    title=
'ರಾಜಕಾರಣ ದೊಂಬರಾಟ ಅಲ್ಲ'

ಮೈಸೂರು: ರಾಜಕಾರಣ ಮನೆತನಕ್ಕೆ ಸೀಮಿತವಲ್ಲ, ನಾಟಕ ಕಂಪನಿಯೂ ಅಲ್ಲವೆಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ಹಿನ್ನೆಲೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಡಿಸೆಂಬರ್ 6 ಆದ ಮೇಲೆ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ’ ಅಂತಾ ಹೇಳಿದ್ದಾರೆ.

ಅರವಿಂದ ಲಿಂಬಾವಳಿ ಹೇಳಿರುವ ಮಾತಿಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ ತಾರೀಕು ಆದ ಮೇಲೆ ಅದನ್ನು ವಿವರಿಸ್ತಿನಿ. ಹೈಕಮಾಂಡ್ ಸೂಚನೆ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಎಂಬುದನ್ನು ಹೇಳ್ತಿನಿ. ಡಿ.6ಕ್ಕೆ ನಾನೇ ಎಲ್ಲವನ್ನೂ ಬಿಡಿ-ಬಿಡಿಯಾಗಿ ವಿವರಿಸ್ತಿನಿ ಅಂತಾ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ಬಿಜೆಪಿಯಲ್ಲಿರುವ ಕೆಜೆಪಿಯ ಅಧ್ಯಕ್ಷರೇ ಹೊರತು ಅಸಲಿ ಬಿಜೆಪಿಯ ಅಧ್ಯಕ್ಷರಲ್ಲ!

ರಾಜಕಾರಣ ದೊಂಬರಾಟ ಅಲ್ಲ, ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಲ್ಲ. ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ ಅಂತಾ ವಿ.ಸೋಮಣ್ಣ ಹೇಳಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮನ್ನು ಸಂಪರ್ಕಿಸಿದ್ದರಾ? ಎಂಬ ಪ್ರಶ್ನೆಗೆ ಸೋಮಣ್ಣ ಪ್ರತಿಕ್ರಿಯಿಸಿದ್ದು, ‘ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಸಹ ಯಾರನ್ನು ಸಂಪರ್ಕಿಸಿಲ್ಲ. ಆ ರೀತಿಯ ಯಾವ ಪ್ರಯತ್ನವೂ ನಡೆದಿಲ್ಲವೆಂದು ಹೇಳಿದ್ದಾರೆ.

ಸೋಮಣ್ಣನಿಂದ ಅಂತರ ಕಾಯ್ದುಕೊಂಡ ಬಿಜೆಪಿ ನಾಯಕರು

ಮಾಜಿ ಸಚಿವ ವಿ.ಸೋಮಣ್ಣನಿಂದ ಮೈಸೂರು ಬಿಜೆಪಿ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಓರ್ವ ಶಾಸಕ, ಓರ್ವ ಸಂಸದ ಹಾಗೂ ಮಾಜಿ ಶಾಸಕರು ಸೇರಿದಂತೆ ಅನೇಕ ಮುಖಂಡರು ಸೋಮಣ್ಣ ಭೇಟಿಗೆ ಹಿಂದೇಟು ಹಾಕಿದ್ದಾರೆ. ಸೋಮಣ್ಣನವರ ಕಟ್ಟಾ ಬೆಂಬಲಿಗರು ಬಿಟ್ಟರೆ ಯಾರೂ ಸಹ ಸೋಮಣ್ಣ ಭೇಟಿಗೆ ಬಂದಿಲ್ಲ. ತಮ್ಮ ಆಪ್ತರ ಜೊತೆ ಹೋಟೆಲ್‍ನಲ್ಲಿ ಸೋಮಣ್ಣ ಉಪಹಾರ ಸೇವನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News