ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌

ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ ಅಂತಾ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

Written by - Puttaraj K Alur | Last Updated : Apr 15, 2024, 07:25 AM IST
  • ಮುಖ್ಯಮಂತ್ರಿ ಆಗಲು ನಾನು ಸಮರ್ಥನಿದ್ದೇನೆ. ನನಗೆ ಐದು ವರ್ಷ ಅಧಿಕಾರ ಕೊಟ್ಟು ನೋಡಲಿ
  • ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ದರೇ, ನಾನು 5 ಸಾವಿರ ಕೊಡ್ತಿನಿ
  • ಭ್ರಷ್ಟಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್
ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌  title=
ಬಸನಗೌಡ ಪಾಟೀಲ್‌ ಯತ್ನಾಳ್

ಬೆಳಗಾವಿ: ಮುಖ್ಯಮಂತ್ರಿ ಆಗಲು ನಾನು ಸಮರ್ಥನಿದ್ದೇನೆ. ನನಗೆ ಐದು ವರ್ಷ ಅಧಿಕಾರ ಕೊಟ್ಟು ನೋಡಲಿ, ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ದರೇ, ನಾನು 5 ಸಾವಿರ ಕೊಡ್ತಿನಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಅಧಿಕಾರವಿದ್ದರೆ ಪ್ರಾಮಾಣಿಕವಾಗಿ ಜನರಿಗೆ ಕೊಡಬಹುದು. ಜನರಿಗೆ ಬೇಕಾಗಿದ್ದು ನೀರಾವರಿ ಸೌಲಭ್ಯಗಳು, ಜನರು ಸ್ವಾವಲಂಬಿಯಾಗಿ ಬದುಕುವಂತಹ ವ್ಯವಸ್ಥೆಯನ್ನು ನಾನು ಮಾಡುತ್ತೇನೆ. ಭ್ರಷ್ಟಚಾರ ನಿರ್ಮೂಲನೆ ಮಾಡುತ್ತೇನೆ, ಸಿಎಂ ಸ್ಥಾನ ಕೊಟ್ಟರೆ ಇವನ್ನೆಲ್ಲಾ ಮಾಡಬಹುದು. ಇಲ್ಲದಿದ್ರೆ ಹೀಗೆ ಮಾತನಾಡುತ್ತಾ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.  

ಇದನ್ನೂ ಓದಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿ

ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಇನ್ನು ಒಂದು ವರ್ಷದಲ್ಲಿ ಶಾಸಕರಿಗೆ ಸಂಬಳ ಸಿಗದಂತಹ ಪರಿಸ್ಥಿರಿ ಬರುತ್ತದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನವರು ಬೇರೆ ರೀತಿಯಲ್ಲಿ ಮಾತನಾಡಲು ಶುರು ಮಾಡುತ್ತಾರೆ. ಕಾಂಗ್ರೆಸ್ MLAಗಳು ಯಾರೂ ಅಭಿವೃದ್ಧಿ ಕೇಳಬೇಡಿ , ನಮಗೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದೇ ಕಠಿಣವಾಗಿದೆ ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೇಳಿದ್ದಾರೆ. ಹೀಗಾಗಿ ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತ ಬಿದ್ದಿದೆ ಎಂದಿದ್ದಾರೆ. 

ಬಿಜೆಪಿ 40% ಸರ್ಕಾರ ಅಂತಾ ಟೀಕಿಸಿದ್ರು, ಕಾಂಗ್ರೆಸ್ ಸರ್ಕಾರದಲ್ಲಿ ಅದು ಈಗ 50% ಆಗಿದೆ. ಬಿಜೆಪಿ ಟೀಕೆ ಮಾಡಲು ಕಾಂಗ್ರೆಸ್‌ಗೆ ಯಾವ ನೈತಿಕತೆ ಇದೆ? ಬಿಜೆಪಿ ಸರ್ಕಾರದ 40% ಕಮಿಷನ್ ಪ್ರಕರಣವನ್ನು ತನಿಖೆ ಮಾಡಲಿ, ಸಿಬಿಐಗೆ ವಹಿಸಲಿ. ಯಾಕೆ ಕೊಡ್ತಿಲ್ಲ, ನೀವು ಹಿಂದಿನವರು ಅಡ್ಜೆಸ್ಟಮೆಂಟ್ ಮಾಡಿಕೊಂಡಿದ್ರೇನು..? PSI ಹಗರಣದಲ್ಲಿ ಬಿಜೆಪಿ ಬಾರಿ ಲೂಟಿ ನಡೆಸಿದ್ದಾರೆಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಅಧಿಕಾರಿ ಅವರ ಬಳಿಯೇ ಇದೆ, ಸಿಬಿಐಗೆ ವಹಿಸಲಿ ಅಂತಾ ಯತ್ನಾಳ್‌ ಸವಾಲು ಹಾಕಿದರು.

ಇದನ್ನೂ ಓದಿ: "ಬಡವರಿಗೆ ಮನೆ ಕಟ್ಟಿಕೊಡಲು ವಿಫಲವಾದ ಬಿಜೆಪಿಯ ವಿ.ಸೋಮಣ್ಣ ಲೋಕಸಭೆಯಲ್ಲಿ ಏನು ಮಾಡುತ್ತಾರೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News