"ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ"

ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

Written by - Prashobh Devanahalli | Edited by - Manjunath N | Last Updated : Aug 18, 2024, 02:34 PM IST
  • - ಭ್ರಷ್ಟಾಚಾರ ಎಲ್ಲಾ ಸಮಾಜ, ದೇಶಕ್ಕೆ ಅಂಟಿದ ರೋಗ; ಇದರ ವಿರುದ್ಧ ಹೋರಾಟಕ್ಕೆ ಯಾರೂ ಜಾತಿಯ ಲೇಪನ ಮಾಡಬಾರದು
  • - ಕಾಂಗ್ರೆಸ್ಸಿಗರಿಗೆ ಮತ್ತು ಸಿಎಂ ಬೆಂಬಲಿಸಿ ಬೀದಿಗಿಳಿದವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿವಿಮಾತು
 "ಆತ್ಮಸಾಕ್ಷಿ ಇದ್ರೆ ಸಿಎಂ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ" title=

ಹುಬ್ಬಳ್ಳಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ರಾಜ್ಯದಲ್ಲಿ ನಿಮ್ಮದೇ ಸರ್ಕಾರವಿದೆ. ಸ್ವತಃ ನೀವೇ ಸಿಎಂ ಆಗಿರುವಾಗ ಸ್ಥಳೀಯ ಅಧಿಕಾರಿಗಳು ತನಿಖೆ ಹೇಗೆ ಮಾಡಿಯಾರು? ಎಂದು ಪ್ರಶ್ನಿಸಿದ ಜೋಶಿ, ಸಿಎಂ ಆರೋಪ ಮುಕ್ತರಾಗುವ ತನಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಭ್ರಷ್ಟಾಚಾರ ಎಲ್ಲಾ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗವಾಗಿದ್ದು, ಇದರ ನಿರ್ಮೂಲನೆ ಆಗಬೇಕೆಂದರೆ ಯಾರೂ ಜಾತಿ ಲೇಪನ ಮಾಡಬಾರದು ಎಂದು ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಭ್ರಷ್ಟಾಚಾರಕ್ಕೆ  ಯಾವುದೇ ಜಾತಿ ಎಂಬುದಿಲ್ಲ. ಎಲ್ಲಾ ಸಮಾಜ ಮತ್ತು ದೇಶಕ್ಕೆ ಅಂಟಿದ ಪಿಡುಗಾಗಿದೆ. ಹಾಗಾಗಿ ಇದರ ವಿರುದ್ಧ ಹೋರಾಟಕ್ಕಿಳಿದರೆ ಯಾರೂ ಜಾತಿಯ ನೆಪವನ್ನು ಮುಂದಿಡಬಾರದು ಎಂದು ಕಾಂಗ್ರೆಸ್ಸಿಗರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: ಭೂಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ-ಸಚಿವ ಕೃಷ್ಣ ಬೈರೇಗೌಡ

ಮುಡಾ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಹಿಂದ ವರ್ಗವರು ಜಾತಿ ಲೇಪನ ಹಚ್ಚಿ ಬೀದಿಗಿಳಿದು ಹೋರಾಡುವುದು ಸರಿಯಲ್ಲ ಎಂದು ಜೋಶಿ ಖಂಡಿಸಿದರು.

ರಾಜ್ಯಪಾಲರು ಅತ್ಯಂತ ಹಿಂದುಳಿದ, ಎಸ್ಸಿ ಸಮಾಜಕ್ಕೆ ಸೇರಿದವರು. ಅಂಥವರ ವಿರುದ್ಧ ಬೀದಿಗಿಳಿಯುವುದು ಕಾಂಗ್ರೆಸ್ಸಿಗೆ ಶೋಭೆ ತರದು ಎಂದರು.

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಜನಕ. ನೆಹರು ಕಾಲದಿಂದ ಮನಮೋಹನ್ ಸಿಂಗ್ ಕಾಲದವರೆಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದಿದೆ. ಹಾಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಪರ, ಬೆಂಬಲಕ್ಕೆ ನಿಂತಿದ್ದು, ಇದರಲ್ಲಿ ಆಶ್ಚರ್ಯ ಏನಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News